ಶೂಟಿಂಗ್ ವೇಳೆ ನಿಯಂತ್ರಣ ತಪ್ಪಿ ಕಾಲು ಜಾರಿ ಬಿದ್ದಿರುವ ಘಟನೆ ನಡೆದಿದೆ.

ಮೈಸೂರು, ಏಪ್ರಿಲ್ 29: ತೆಲುಗು ನಟ ಗೋಪಿಚಂದ್ ತಮ್ಮ ಮುಂದಿನ ಸಿನಿಮಾದ ಚಿತ್ರೀಕರಣವನ್ನು ಕರ್ನಾಟಕದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಸುತ್ತಿದ್ದು, ಶೂಟಿಂಗ್ ವೇಳೆ ನಿಯಂತ್ರಣ ತಪ್ಪಿ ಕಾಲು ಜಾರಿ ಬಿದ್ದಿರುವ ಘಟನೆ ನಡೆದಿದೆ.

ಶುಕ್ರವಾರ ನಿಯಂತ್ರಣ ತಪ್ಪಿ ಕಾಲು ಜಾರಿ ಬಿದ್ದಿದ್ದರಿಂದ ಅಲ್ಪ ಪ್ರಮಾಣದ ಗಾಯವಾಗಿದ್ದು, ಹಾಗಾಗಿ ಚಿತ್ರದ ಚಿತ್ರೀಕರಣವು ಇಂದು ಸ್ಥಗಿತಗೊಂಡಿದೆ.

ಇನ್ನು ಈ ಕುರಿತು ಚಲನಚಿತ್ರ ಘಟಕ ಪ್ರತಕ್ರಿಯಿಸಿದ್ದು, ನಟ ಗೋಪಿಚಂದ್ ಚೆನ್ನಾಗಿದ್ದಾರೆ. ಘಟನೆಯ ಬಗ್ಗೆ ಚಿಂತಿಸಬೇಡಿ ಎಂದು ಅವರ ಅಭಿಮಾನಿಗಳು ಮತ್ತು ಸ್ನೇಹಿತರಿಗೆ ವಿನಂತಿಸಿದೆ.

ಅಂದಹಾಗೆ, ಈ ಚಿತ್ರ ಶ್ರೀನಿವಾಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ನಾಯಕಿಯಾಗಿ ಹಯಾತಿ ಮತ್ತು ಜಗಪತಿಬಾಬು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಶೋಕ್ದಾರ್ ಧನ್ವೀರ್ ಗೌಡ ನಟನೆಯ 'ವಾಮನ' ಸಿನಿಮಾದ ಶೂಟಿಂಗ್!

Sat Apr 30 , 2022
  ಶೋಕ್ದಾರ್ ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ಸಿಕ್ಕಿದೆ. ಧನ್ವೀರ್ ಗೆ ನಾಯಕಿಯಾಗಿ ಯಾರು ಆಯ್ಕೆಯಾಗಲಿದ್ದಾರೆ ಎನ್ನುವ ಕುತೂಹಲದ ಪ್ರಶ್ನೆಗೆ ಚಿತ್ರತಂಡ ಉತ್ತರ ಸಿಕ್ಕಿದೆ. ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ಇದು ಮೊದಲ ಕನ್ನಡ […]

Advertisement

Wordpress Social Share Plugin powered by Ultimatelysocial