ಬ್ರೆಜ್ಹಿಲ್ ಹಾಗೂ ದಕ್ಷಿಣ ಆಫ್ರಿಕಾದಿಂದ ರೂಪಾಂತರಿ ಕೋವಿಡ್ ವೈರಾಣು ಭಾರತಕ್ಕೆ ಬಂದಿರುವುದನ್ನು ಭಾರತೀಯ ಔಷಧ ಸಂಶೋಧನಾ ಘಟಕ ದೃಢಪಡಿಸಿದ ಬೆನ್ನಿಗೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾರೆ. ಕೋವಿಡ್ ನಿಯಂತ್ರಿಸುವಲ್ಲಿ ನರೇಂದ್ರ ಮೋದಿ ಸರ್ಕಾರ ನಿರ್ಲಕ್ಷ್ಯ ಧೋರಣೆಯನ್ನು ತೋರಿಸುತ್ತಿದೆ ಎಂದು ರಾಹುಲ್ ಗುಡುಗಿದ್ದಾರೆ.
“GOI (ಗವರ್ನಮೆಂಟ್ ಆಫ್ ಇಂಡಿಯಾ) ಕೋವಿಡ್ 19 ಬಗ್ಗೆ ತುಂಬಾ ನಿರ್ಲಕ್ಷ್ಯ ವಹಿಸುತ್ತಿದೆ. ಓವರ್ ಕಾನ್ಫಿಡೆನ್ಸ್ ತೋರಿಸುತ್ತಿದೆ. ಆದರೇ, ಕೋವಿಡ್ ಸಮಸ್ಯೆ ಇನ್ನೂ ಮುಗಿದಿಲ್ಲ.” ಎಂದು ತಮ್ಮ ಟ್ವೀಟ್ ಖಾತೆಯಲ್ಲಿ ಕೇಂದ್ರ ಸರ್ಕಾರದ ಬಗ್ಗೆ ಹರಿಹಾಯ್ದಿದ್ದಾರೆ.
ಇದನ್ನೂ ಓದಿ:ಟೈಯರ್ ಹಾಗೂ ಆಟೋಮೊಬೈಲ್ ಗೆ ಬೆಂಕಿ ಅನಾಹುತ