KSRTC ವತಿಯಿಂದ ಪ್ರಯಾಣಿಕರಿಗೆ ದಸರಾ ಪ್ಯಾಕೇಜ್ ಘೋಷಣೆ…!
2021ರ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಚಾಲನೆ ಸಿಕ್ಕಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಸರಾ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ ಮಾಡಿದೆ. ದಸರಾ ಸಂದರ್ಭದಲ್ಲಿ ಸಾವಿರಾರು ಪ್ರವಾಸಿಗರು ಮೈಸೂರಿಗೆ ಮತ್ತು ಇತರ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಮೈಸೂರು ಮತ್ತು ಸುತ್ತಮುತ್ತಲ ಪ್ರವಾಸಿ ತಾಣಗಳನ್ನ ನೋಡಲು ಅನುಕೂಲವಾಗುವಂತೆ ಪ್ರವಾಸಿ ಪ್ಯಾಕೇಜ್ ಘೋಷಿಸಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ,ಮೈಸೂರು ಸುತ್ತಮುತ್ತಲಿನ ಪ್ರೇಕ್ಷಣಿಯ ಸ್ಥಳಗಳನ್ನ ವೀಕ್ಷಿಸಲು ಅಕ್ಟೋಬರ್ 9ರಿಂದ 24ರ ತನಕ ಈ ಪ್ಯಾಕೇಜ್ಗಳಲ್ಲಿ ಸಂಚಾರ ನಡೆಸಬಹುದಾಗಿದೆ. ಗಿರಿ ದರ್ಶನಿ, ದೇವ ದರ್ಶಿನಿ, ಜಲದರ್ಶನಿ ಪ್ಯಾಕೇಜ್ಗಳ ಮೂಲಕ ಜನರು ಪ್ರವಾಸಿ ತಾಣಗಳನ್ನ ವೀಕ್ಷಿಸಬಹುದು.ಇನ್ನು KSRTCಯ ಈ ವೀಶೆಷ ಪ್ಯಾಕೇಜ್ ಗಳಿಂದ ಪ್ರಯಾಣಿಕರ ಮನದಲ್ಲಿ ಮಂದಹಾಸ ಮುಡುವಂತಾಗಿಂದೆ.