ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿ, ಅಟ್ಟಹಾಸ ಮೆರೆದಿರೋದು ಖಂಡನೀಯವಾಗಿದೆ. ಈ ಕ್ರಮವನ್ನು ಸರ್ಕಾರ ಎಂದೂ ಮನ್ನಿಸೋದಿಲ್ಲ. ಪುತ್ಥಳಿ ಕೆಡವಿ, ಪುಂಡಾಟ ಮೆರೆದಂತ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದ್ದಾರೆ.ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿ, ವೀರ ಮರಣಹೊಂದಿದಂತ ಮಹಾನಾಯಕ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಆಗಿದ್ದಾರೆ. ಬ್ರಿಟೀಷರ ವಿರುದ್ಧ ಹೋರಾಡಿ ದೇಶದ ಕೀರ್ತಿ ಪತಾಕೆಯನ್ನು ಉತ್ತುಂಗಕೇರಿಸಿದಂತ ವ್ಯಕ್ತಿಯ ಪ್ರತಿಮೆಯನ್ನೇ ವಿಕೃತಗೊಳಿಸಿರೋದು, ಇಡೀ ನಾಗರೀಕ ಸಮಾಜವೇ ತಲೆ ತಗ್ಗಿಸುವಂತ ಕೆಲಸವಾಗಿದೆ. ಇದು ಖಂಡನೀಯವೇ ಸರಿ ಎಂದರು.ನಾಡಿನಲ್ಲಿ ಮತ್ತಾರು ಈ ದಷ್ಕೃತ್ಯಕ್ಕೆ ಕೈಹಾಕಬಾರದು. ಇದೀಗ ಪುತ್ಥಳಿ ಕೆಡವಿ ವಿಕೃತಿಗೊಳಿಸಿರುವಂತ ಕಿಡಿಗೇಡಿಗಳ ವಿರುದ್ಧ ಕಾನೂನ ಕ್ರಮ ಕೈಗೊಳ್ಳಲಾಗುತ್ತದೆ. ನಾಡಿನ ಜನರು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada