ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ…!

ಅಹಮದಾಬಾದ್: ಉತ್ತರ ಪ್ರದೇಶದ ವಾರಣಾಸಿಯಯಲ್ಲಿ ಶಿವಲಿಂಗ ಪತ್ತೆಯಾಗಿರುವ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್‌ನ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ವಕ್ತಾರ ಡ್ಯಾನಿಶ್ ಖುರೇಷಿ ಅವರನ್ನು ಅಹಮದಾಬಾದ್ ಸೈಬರ್ ಕ್ರೈಮ್ ಬ್ರಾಂಚ್ ಬಂಧಿಸಿದೆ.

ಶಿವಲಿಂಗ ಕುರಿತಾಗಿ ಮೇಲೆ ಆಕ್ಷೇಪಾರ್ಹ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಖುರೇಷಿ ವಿರುದ್ಧ ವಿಶ್ವ ಹಿಂದೂ ಪರಿಷತ್ ದೂರು ದಾಖಲಿಸಿದೆ.

ವಾರಾಣಸಿ ವಿಶ್ವನಾಥ ದೇವಾಲಯದ ಬಳಿಯಿರುವ ಮಸೀದಿಯಲ್ಲಿ ಮೂರು ದಿನ ನಡೆದ ಸರ್ವೇಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಹಿಂದೂ ಸಂಸ್ಥೆಗಳ ಪರ ವಕೀಲರು ಹೇಳಿದ್ದರು. ಆದರೆ ಮಸೀದಿಯ ಆಡಳಿತ ಮಂಡಳಿ ಇದನ್ನು ಅಲ್ಲಗಳೆದಿದ್ದು, ಇದು ಶಿವಲಿಂಗವಲ್ಲ. ಇದು ನೀರಿನ ಫೌಂಟನ್ ಎಂದಿದೆ.

“ಖುರೇಷಿಗೆ ಸೇರಿದ ಟ್ವಿಟರ್ ಹ್ಯಾಂಡಲ್‌ನಿಂದ ಹಿಂದೂ ದೇವರು ಮತ್ತು ದೇವತೆಗಳ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿರುವುದು ಸೈಬರ್ ತಂಡದ ಗಮನಕ್ಕೆ ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ನಾವು ಟ್ವಿಟರ್ ಹ್ಯಾಂಡಲ್‌ನ ತಾಂತ್ರಿಕ ವಿಶ್ಲೇಷಣೆ ನಡೆಸಿ ಖುರೇಷಿಯನ್ನು ಬಂಧಿಸಿದ್ದೇವೆ” ಎಂದು ಅಪರಾಧ ವಿಭಾಗ ಎಸಿಪಿ ಜೆಎಂ ಯಾದವ್ ಅವರು ಪಿಟಿಐ ವರದಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉದ್ಯಮಿ, ಪತ್ರಿಕೋದ್ಯಮಿಗಳಿಗೆ ರಾಜ್ಯಸಭೆ ಟಿಕೆಟ್ ಘೋಷಣೆ...!

Thu May 19 , 2022
ಹೈದರಾಬಾದ್, ಮೇ 19: ರಾಜ್ಯಸಭೆ ಚುನಾವಣೆಗಾಗಿ ವಿವಿಧ ರಾಜ್ಯಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಭರದಿಂದ ಸಾಗಿದೆ. ತೆಲಂಗಾಣದಿಂದ ರಾಜ್ಯಸಭೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ತೆಲಂಗಾಣ ರಾಷ್ಟ್ರಸಮಿತಿ(ಟಿಆರ್‌ಎಸ್) ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಪ್ರಕಟಿಸಿದ್ದಾರೆ. ತೆಲಂಗಾಣ ರಾಷ್ಟ್ರಸಮಿತಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂವರು ಹೆಸರಿದೆ. ಈ ಪೈಕಿ ಫಾರ್ಮಾಸ್ಯೂಟಿಕಲ್ಸ್ ಕ್ಷೇತ್ರದ ಖ್ಯಾತ ಉದ್ಯಮಿ, ಪಾರ್ಥಸಾರಥಿ ರೆಡ್ಡಿ ಹಾಗೂ ಮತ್ತೊಬ್ಬ ಉದ್ಯಮಿ ರವಿಚಂದ್ರ ಹೆಸರು ಗಮನ ಸೆಳೆದಿವೆ. ವಡ್ಡಿರಾಜು ರವಿಚಂದ್ರ ಹಿಂದುಳಿದ […]

Advertisement

Wordpress Social Share Plugin powered by Ultimatelysocial