ರೈತ ಮಹಿಳೆಯರಿಗೆ ಮಹತ್ವದ ಮಾಹಿತಿ: ಹಿತ್ತಲು ಕೋಳಿ ಸಾಕಾಣಿಕೆ ಕೈಗೊಳ್ಳಲು ಆಸಕ್ತ ಅರ್ಜಿ ಆಹ್ವಾನ

ರೈತ ಮಹಿಳೆಯರಿಗೆ ಮಹತ್ವದ ಮಾಹಿತಿ: ಹಿತ್ತಲು ಕೋಳಿ ಸಾಕಾಣಿಕೆ ಕೈಗೊಳ್ಳಲು ಆಸಕ್ತ ಅರ್ಜಿ ಆಹ್ವಾನ

ಧಾರವಾಡ : ಪಶುಪಾಲನಾ ಮತ್ತು ಪಶು ವೈದ್ಯಸೇವಾ ಇಲಾಖೆಯಿಂದ ಪ್ರಸಕ್ತ 2021-22ನೇ ಸಾಲಿಗಾಗಿ ವಿಸ್ತರಣಾ ಘಟಕ ಬಲಪಡಿಸುವಿಕೆ ಕಾರ್ಯಕ್ರಮದಡಿಯಲ್ಲಿ, ಹಿತ್ತಲು ಕೋಳಿ ಸಾಕಾಣಿಕೆ ಕೈಗೊಳ್ಳಲು ಆಸಕ್ತ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಡಿಯಲ್ಲಿ ಒಂದು ಘಟಕಕ್ಕೆ ಆರು ವಾರಗಳ ವಯಸ್ಸಿನ ಐದು ಕೋಳಿ ಮರಿಗಳನ್ನು ವಿತರಿಸಲಾಗುವುದು. ಒಂದು ಘಟಕ ವೆಚ್ಚ ರೂ.550/- ಗಳಾಗಿರುತ್ತದೆ. ಜಿಲ್ಲೆಗೆ ಒಟ್ಟು 352 ಘಟಕಗಳ ಗುರಿ ನಿಗದಿ ಪಡಿಸಲಾಗಿದ್ದು, ಸರ್ಕಾರದ ನಿಯಮಾವಳಿಗಳನ್ವಯ ಫಲಾನುಭವಿಗಳ ಆಯ್ಕೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ದಿವ್ಯಾಂಗರಿಗೆ ಮೀಸಲಾತಿ ನೀಡಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿಗಳನ್ನು ಕಡ್ಡಾಯವಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಸಲ್ಲಿಸಬೇಕು. ಫಲಾನುಭವಿಗಳನ್ನು ಸರ್ಕಾರದ ನಿಯಮಾಳಿಗಳನ್ವಯ ಆಯ್ಕೆ ಮಾಡಿ ಜಿಲ್ಲಾ ಪಂಚಾಯತ ಅನುಮೋದನೆ ಪಡೆದು ಯೋಜನೆ ಅನುμÁ್ಠನಗೊಳಿಸಲಾಗುವುದು. ಆಸಕ್ತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅರ್ಜಿಗಳಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಬಹುದಾಗಿದೆ.ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜನವರಿ 10, 2022 ರ ಒಳಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಸಲ್ಲಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಸೇವಾ ಇಲಾಖೆ ಡಾ|| ಉಮೇಶ.ಎನ್.ಕೊಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತೀಯ ವಾಯುಪಡೆಯ MiG-21 ವಿಮಾನ ಪತನ : ಪೈಲಟ್ ಸಾವು | MIG-21

Sat Dec 25 , 2021
ನವದೆಹಲಿ:ಶುಕ್ರವಾರ ಸಂಜೆ ಭಾರತೀಯ ವಾಯುಪಡೆಯ (IAF) ಮಿಗ್-21 ವಿಮಾನವು ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ತರಬೇತಿ ಪಡೆಯುತ್ತಿದ್ದಾಗ ಪತನಗೊಂಡಿದ್ದು, ಅದರ ಪೈಲಟ್ ಸಾವನ್ನಪ್ಪಿದ್ದಾರೆ. ಭಾರತೀಯ ವಾಯುಪಡೆಯ MiG-21 ವಿಮಾನವು ಡೆಸರ್ಟ್ ನ್ಯಾಷನಲ್ ಪಾರ್ಕ್ (DNP) ಅಡಿಯಲ್ಲಿ ಸ್ಯಾಮ್‌ನಲ್ಲಿ ಪತನಗೊಂಡಿದೆ ಎಂದು ನಮಗೆ ಇಂದು ಸಂಜೆ ಮಾಹಿತಿ ಸಿಕ್ಕಿತು. ಜೈಸಲ್ಮೇರ್ ವಾಯುನೆಲೆಯಿಂದ ವಿಮಾನ ಟೇಕ್ ಆಫ್ ಆಗಿತ್ತು’ ಎಂದು ಜೈಸಲ್ಮೇರ್ ಎಸ್ಪಿ ಅಜಯ್ ಸಿಂಗ್ ಹೇಳಿದ್ದಾರೆ.ಅವರು ಸ್ಥಳಕ್ಕೆ ಧಾವಿಸುತ್ತಿದ್ದಾರೆ ಮತ್ತು ವಾಯುಪಡೆಗೆ ತಿಳಿಸಲಾಗಿದೆ […]

Advertisement

Wordpress Social Share Plugin powered by Ultimatelysocial