ದಾವಣಗೆರೆ, ಸೆಪ್ಟೆಂಬರ್ 30: ” ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ವಿಚಾರಕ್ಕೆ ತಂತಿ ಮೇಲಿನ ನಡಿಗೆ ಎಂದು ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ” ಎಂದು ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಪ್ರತಿಕ್ರಿಯೆ ನೀಡಿದರು.
ದಾವಣಗೆರೆ ನಗರದ ತೊಗಟವೀರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಯುವಮೋರ್ಚಾ ಕಾರ್ಯಕ್ರಮಕ್ಕೆ ಬರುವ ಮುನ್ನ ಮಾತನಾಡಿ, ಯಡಿಯೂರಪ್ಪ ಹುಟ್ಟು ಹೋರಾಟಗಾರರು. ಅವರು ಹೋರಾಟದ ಹಿನ್ನೆಲೆಯಲ್ಲಿ ಹೇಳಿರಬಹುದು. ಪಕ್ಷ ಸಂಘಟನೆ, ಹೊಂದಾಣಿಕೆಯಿಂದ ಸರ್ಕಾರ ಮುನ್ನಡೆಯುತ್ತಿರುವ ಬಗ್ಗೆ ಹಿರಿಯರು ಪ್ರತಿಕ್ರಿಯೆ ನೀಡುತ್ತಾರೆ ಎಂದು ರೇಣುಕಾಚಾರ್ಯ ಅವರ ಕಡೆ ಕೈ ತೋರಿಸಿದರು.