ದಾವಣಗೆರೆ : ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದ ನಂತರ ಚನ್ನೇಶಪುರದಲ್ಲಿ ಪ್ರತ್ಯಕ್ಷವಾದ ಮಾಡಾಳ್ ವಿರೂಪಾಕ್ಷಪ್ಪ ನನ್ನ ವಿರುದ್ಧ ಪಿತೂರಿ ನಡೆದಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಮಾಡಾಳ್ ವಿರೂಪಾಕ್ಷಪ್ಪ ಮಾತನಾಡಿ ‘ಲೋಕಾಯುಕ್ತರು ದಾಳಿ ಮಾಡುವುದಕ್ಕಿಂತ ಅರ್ಧ ಗಂಟೆ ಮೊದಲು ಅಪರಿಚಿತನೊಬ್ಬ ನಮ್ಮ ಕಚೇರಿಯಲ್ಲಿ ಹಣ ಇರಿಸಿ ಹೋಗಿದ್ದ ಎಂದಿದ್ದಾರೆ.
‘ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ರೂಪಿಸಿ ಇಲ್ಲಸಲ್ಲದ ಆರೋಪ ಹೊರಿಸಲಾಗಿದೆ. ನಮ್ಮ ಭಾಗದಲ್ಲಿ ಅಡಿಕೆ ತೋಟ ಹೊಂದಿರುವವರ ಮನೆಗಳಲ್ಲಿ ಕೋಟಿಗಟ್ಟಲೆ ಹಣ ಇರುವುದು ಸಾಮಾನ್ಯ. ನಮ್ಮ ಅಡಿಕೆ ತೋಟದಿಂದ ಬಂದ ಹಣವನ್ನು ಮನೆಯಲ್ಲಿಟ್ಟಿದ್ದೆವು. ಅದನ್ನೇ ಲೋಕಾಯುಕ್ತ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಸೂಕ್ತ ದಾಖಲೆ ನೀಡಿ ಆ ಹಣವನ್ನು ವಾಪಸ್ ಪಡೆಯುತ್ತೇವೆ’ ಎಂದಿದ್ದಾರೆ.
ವಿರೂಪಾಕ್ಷಪ್ಪ ‘ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದು ಕಣ್ಣೀರು ಸುರಿಸಿ, ನಾನು ತಲೆಮರೆಸಿಕೊಂಡಿಲ್ಲ. ಚನ್ನೇಶಪುರದ ಮನೆಯಲ್ಲೇ ಇದ್ದೆ. ಬೇಸರದಿಂದ ಮೊಬೈಲ್ ಸ್ವಿಚ್ ಆಫ್ ಮಾಡಿದ್ದೆ ಎಂದಿದ್ದಾರೆ. ‘ಪಕ್ಷ ನನ್ನ ವಿರುದ್ಧ ಯಾವುದೇ ಕ್ರಮ ಕೈಗೊಂಡರೂ ಸ್ವಾಗತಿಸುತ್ತೇನೆ. ಸೂಕ್ತ ಕಾನೂನು ಹೋರಾಟ ಮಾಡಿ ಆರೋಪಗಳಿಂದ ಮುಕ್ತನಾಗುತ್ತೇನೆ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada