ಹುಟ್ಟುಹಬ್ಬಕ್ಕೆಂದು ದುಬೈಗೆ ತೆರಳಿದ ಯಶ್ & ಫ್ಯಾಮಿಲಿ

ರಾಕಿಂಗ್ ಸ್ಟಾರ್ ಯಶ್ ಇದೀಗ ನ್ಯಾಷನಲ್ ಸ್ಟಾರ್ ಆಗಿದ್ದಾರೆ. ‘ಕೆಜಿಎಫ್: ಚಾಪ್ಟರ್ 1’ ಹಾಗೂ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾಗಳ ಮೂಲಕ ನಟ ಯಶ್ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಿಕ್ಕಾಪಟ್ಟೆ ಸೌಂಡ್ ಮಾಡಿದ್ದಾರೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ನಟ ಯಶ್ ಯಾವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಹೀಗಿರುವಾಗಲೇ, ನಟ ಯಶ್ ವಿದೇಶಕ್ಕೆ ಹಾರಿದ್ದಾರೆ.ಹೌದು.. ಜನವರಿ 8 ರಂದು ನಟ ಯಶ್ ಅವರ ಜನ್ಮದಿನ. ತಮ್ಮ 37ನೇ ವರ್ಷದ ಹುಟ್ಟುಹಬ್ಬದ ಆಚರಣೆಗೆಂದು ನಟ ಯಶ್ ತಮ್ಮ ಫ್ಯಾಮಿಲಿ ಜೊತೆಗೆ ದುಬೈಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ.ಕುಟುಂಬ ಸಮೇತ ನಟ ಯಶ್ ದುಬೈಗೆ ತೆರಳಿದ್ದಾರೆ ಅಂತ ಹೇಳಲಾಗುತ್ತಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಇರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮಕ್ಕಳ ಜೊತೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಫ್ಲೈಟ್ ಹತ್ತಿದ್ದಾರೆ.ಅದಾಗಲೇ ವಿದೇಶಕ್ಕೆ ಹಾರಿರುವ ಯಶ್, ಹುಟ್ಟುಹಬ್ಬದ ದಿನ ಅಭಿಮಾನಿಗಳ ಜೊತೆಗೆ ಸಮಯ ಕಳೆಯುವುದಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬರೆದ ಪತ್ರದಲ್ಲಿ ನಟ ಯಶ್ ಸ್ಪಷ್ಟ ಪಡಿಸಿದ್ದರು.
‘’ಕ್ಷಮಿಸಿ.. ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ. ಆದರೆ, ಆದಷ್ಟು ಬೇಗ ನಿಮಗೆ ಸಿಗುತ್ತೇನೆ. ಮತ್ತು ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ’’ ಎಂದು ತಮ್ಮ ಪತ್ರದಲ್ಲಿ ಯಶ್ ಬರೆದುಕೊಂಡಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ನಂಜನಗೂಡಿನಲ್ಲಿ ಬಿರುಸುಗೊಂಡ ರಾಜಕೀಯ ಚಟುವಟಿಕೆ ತೆನೆಯಿಳಿಸಿ ಕೈ ಕುಲುಕಿದ ನೂರಾರು ಜೆಡಿಎಸ್ ಮುಖಂಡರು.

Sat Jan 7 , 2023
ಜೆಡಿಎಸ್ ನ ಹಿರಿಯ ಮುಖಂಡರೂ, ಪುರಸಭೆ ಮಾಜಿ ಅಧ್ಯಕ್ಷರೂ ಹಾಗೂ ಹಾಲಿ ಜೆಡಿಎಸ್ ಜಿಲ್ಲಾಧ್ಯಕ್ಷರ ಸಹೋದರ ಎನ್ ಶ್ರೀನಿವಾಸ್ ಅವರೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಪ್ರಮುಖರು. ಅವರ ನೇತೃತ್ವದಲ್ಲಿ ಜೆಡಿಎಸ್ ನ ನೂರಾರು ಕಾರ್ಯಕರ್ತ ಮುಖಂಡರು ಹಾಗೂ ಅವರ ಅಭಿಮಾನಿಗಳು ಸ್ನೇಹಿತರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಕೆಪಿಸಿಸಿ ಕಾರ್ಯಾಧ್ಯಕ್ಷ ರು ಹಾಗೂ ನಂಜನಗೂಡಿನ ಕಾಂಗ್ರೆಸ್ ಅಭ್ಯರ್ಥಿ ಎಂದೇ ಬಿಂಬಿತರಾಗಿರುವ ಆರ್ ಧ್ರುವನಾರಾಯಣ್ ಸಮ್ಮುಖದಲ್ಲಿ ಸೇರ್ಪಡೆಗೊಂಡ ಜೆಡಿಎಸ್ ಮುಖಂಡರು. […]

Advertisement

Wordpress Social Share Plugin powered by Ultimatelysocial