ಅಹಮದಾಬಾದ್, ಮೇ 18- ಗುಜರಾತ್ ಪಾಟಿದಾರ್ ಸಮುದಾಯ ಮೀಸಲಾತಿಗಾಗಿ ಆಂದೋಲನ ನಡೆಸಿ ಪ್ರಭುದ್ಧಮಾನಕ್ಕೆ ಬಂದಿದ್ದ ನಾಯಕ ಹಾರ್ದಿಕ್ ಪಟೇಲ್, ಗುಜರಾತ್ ಕಾಂಗ್ರೆಸ್ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹಾರ್ದಿಕ್ ಸಲ್ಲಿಸಿದ್ದಾರೆ. ಧೈರ್ಯದೊಂದಿಗೆ ಇಂದು ನಾನು ಪಕ್ಷದ ಸ್ಥಾನ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ಅನುಯಾಯಿಗಳು ಮತ್ತು ಗುಜರಾತ್ ಜನರು ನನ್ನ ನಿರ್ಧಾರವನ್ನು ಸ್ವಾಗತಿಸುತ್ತಾರೆ ಎಂದು ನಾನು ಭಾವಿಸುತ್ತೇನೆ.
ಮುಂದಿನ ದಿನಗಳಲ್ಲಿ ನಾನು ನನ್ನದೇ ಆದ ನಿರ್ಧಾರ ತೆಗೆದುಕೊಳ್ಳುತ್ತೇನೆ. ಗುಜರಾತ್ನ ಭವಿಷ್ಯಕ್ಕಾಗಿ ವಾಸ್ತವಿಕವಾದ ಸಕಾರಾತ್ಮಕ ಸೇವೆ ಸಲ್ಲಿಸಲು ನನ್ನಿಂದ ಸಾಧ್ಯವಿದೆ ಎಂದು ಹೇಳಿಕೊಂಡಿದ್ದಾರೆ.
ಕೆಲ ಮೂಲಗಳ ಪ್ರಕಾರ ಹಾರ್ದಿಕ್ ಪಟೇಲ್ ಬಿಜೆಪಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್ನಲ್ಲಿ ಪಕ್ಷದ ನಾಯಕರು ಸಂಘಟನಾತ್ಮಕವಾಗಿ ಸರಿಯಾಗಿ ಕೆಲಸ ಮಾಡುತ್ತಿಲ್ಲ. ತಮ್ಮ ಸಲಹೆಗಳನ್ನು ಪರಿಗಣಿಸುತ್ತಿಲ್ಲ ಎಂಬ ಅಸಮದಾನವನ್ನು ಅವರು ಹೊಂದ್ದಿರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada