ಡೆಹ್ರಾಡೂನ್ : ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಆರೋಗ್ಯ ಹದಗೆಟ್ಟಿದೆ. ಯುವಕನ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ವಿರೋಧಿಸಿ ಡೆಹ್ರಾಡೂನ್ನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ.
ಅಂದ್ಹಾಗೆ,ಉತ್ತರಾಖಂಡದಲ್ಲಿ ನಡೆದ ನೇಮಕಾತಿ ಹಗರಣಗಳ ಬಗ್ಗೆ ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಇತರ ಯುವ ಸಂಘಟನೆಗಳು ಗುರುವಾರ ಡೆಹ್ರಾಡೂನ್ನಲ್ಲಿ ಪ್ರತಿಭಟನೆ ನಡೆಸುತ್ತಿವೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ಇನ್ನು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada