ಹಾಸನ ಮಿಕ್ಸಿ ಸ್ಫೋಟದ ಆರೋಪಿ ಅರೆಸ್ಟ್‌

 

ಹಾಸನದ ಕೊರಿಯರ್‌ ಅಂಗಡಿಯಲ್ಲಿ ಕಳೆದ ಡಿಸೆಂಬರ್‌ ೨೬ರಂದು ಸಂಭವಿಸಿದ ಮಿಕ್ಸಿ ಸ್ಫೋಟ ಪ್ರಕರಣದ ಪ್ರಧಾನ ಆರೋಪಿ ಅನೂಪ್‌ ಕುಮಾರ್‌ನನ್ನು ಬಂಧಿಸಲಾಗಿದೆ. ಆತನನ್ನು ನೆಲಮಂಗಲ ಬಳಿ ಬಂಧಿಸಿದ್ದು, ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಿ ಏಳು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ ಎಂದು ಹಾಸನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು.ಇದರ ಜತೆಗೆ ಆತ ಈ ಕೃತ್ಯವನ್ನು ಯಾಕೆ ಮಾಡಿದ್ದ ಎಂಬುದರ ಬಗ್ಗೆಯೂ ವಿವರಣೆ ನೀಡಿದ್ದಾರೆ.ಹಾಸನದ ವಿಚ್ಛೇದಿತ ಮಹಿಳೆ ವಸಂತಾಗೆ ಮ್ಯಾಟ್ರಿಮೊನಿಯಲ್ಲಿ ಪರಿಚಿತನಾದ ಅನೂಪ್‌ ಕುಮಾರ್‌ ಎಂಬಾತ ಆಕೆಯ ರೂಪಕ್ಕೆ ಮರುಳಾಗಿ ಒಂದಿಷ್ಟು ಕಾಲ ಆಕೆ ಜತೆ ಓಡಾಡಿದ್ದ. ಲಕ್ಷಾಂತರ ರೂ. ಹಣವನ್ನೂ ನೀಡಿದ್ದ ಎನ್ನಲಾಗಿದೆ. ಆದರೆ, ಕೊನೆಗೆ ಆಕೆ ತನ್ನನ್ನು ದೂರ ಮಾಡಲು ಮುಂದಾದಾಗ ಆಕೆಯನ್ನು ಸಾಯಿಸಲು ಇಲ್ಲವೇ ಸೌಂದರ್ಯವನ್ನು ವಿರೂಪಗೊಳಿಸಲು ಮಾಡಿದ ತಂತ್ರವೇ ಈ ಮಿಕ್ಸಿ ಬಾಂಬ್‌! ಆದರೆ, ವಸಂತಾ ಮೂರನೇ ಬಾರಿ ಬಂದ ಪಾರ್ಸೆಲನ್ನು ಕೊರಿಯರ್‌ ಅಂಗಡಿಗೇ ತಂದು ಕೊಟ್ಟಿದ್ದರು. ಅಂದು ಅವಸರದಲ್ಲಿದ್ದ ಅಂಗಡಿ ಮಾಲೀಕ ಶಶಿಕುಮಾರ್‌ ಈ ಮಿಕ್ಸಿಯನ್ನು ಎತ್ತಿ ಪಕ್ಕಕ್ಕೆ ಇಟ್ಟಾಗ ಅದು ಸ್ಫೋಟಗೊಂಡಿತ್ತು. ಶಶಿಕುಮಾರ್‌ ಅವರ ಎರಡು ಕೈಬೆರಳುಗಳು ಕತ್ತರಿಸಿ ಹೋಗಿದ್ದವು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

`ಮೋದಿ ಬಳಿ ನಾಯಿಮರಿಯಂತೆ ಇರ್ತಾರೆ'

Wed Jan 4 , 2023
ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಎದುರು ನಾಯಿಯಂತೆ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ವಿಪಕ್ಷ ನಾಯಕ ಸಿದ್ದರಾಮಯ್ಯರ ವ್ಯಕ್ತಿತ್ವ ತೋರಿಸುತ್ತೆ.ನಾಯಿ ನಿಯತ್ತಿನ ಪ್ರಾಣಿ ಎಂಬುದು ಅವರಿಗೆ ಗೊತ್ತಿಲ್ಲ ಅನಿಸುತ್ತೆ. ಸಿದ್ದರಾಮಯ್ಯ ಹೇಳಿಕೆಗೆ ನಾಡಿನ ಜನರು ಉತ್ತರ ಕೊಡುತ್ತಾರೆ. ನಾನು ನಿಯತ್ತಾಗಿ ಸರ್ಕಾರ ನಡೆಸುತ್ತಿದ್ದೇನೆ. ಸಿದ್ದರಾಮಯ್ಯ ರೀತಿ ಸುಳ್ಳು ಹೇಳಿಕೊಂಡು ನಾನು ತಿರುಗುವುದಿಲ್ಲ ಎಂದು ತಿರುಗೇಟು […]

Advertisement

Wordpress Social Share Plugin powered by Ultimatelysocial