ಹಾಸನ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದವನ್ನು ರಾಜಕೀಯಗೊಳಿಸಿದ್ದೇ ಬಿಜೆಪಿಯ ಅಂಗ ಸಂಸ್ಥೆಗಳು.

 

ಹಾಸನ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದವನ್ನು ರಾಜಕೀಯಗೊಳಿಸಿದ್ದೇ ಬಿಜೆಪಿಯ ಅಂಗ ಸಂಸ್ಥೆಗಳು. ಈ ವಿವಾದ ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಿಸಿದರು.

ನಗರದ ನಂದಗೋಕುಲ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಡಿಜಿಟಲ್ ಸದಸ್ಯತ್ವ ಕಾರ್ಯಾಗಾರದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿ ಇಲ್ಲ.

ಇದೆಲ್ಲವೂ ಸರ್ಕಾರದ ಪ್ರಾಯೋಜಿತ ಎಂಬುದನ್ನು ಸಚಿವರೇ ಒಪ್ಪಿಕೊಂಡಿದ್ದಾರೆ ಎಂದು ದೂರಿದರು.

ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರ ನ್ಯಾಯಾಲಯದಲ್ಲಿದೆ. ಮಕ್ಕಳಿಗೆ ಶಿಕ್ಷಣ ನೀಡುವುದು ಹಾಗೂ ಹೆಣ್ಣು ಮಕ್ಕಳ ರಕ್ಷಣೆ ಮಾಡಬೇಕಿರುವುದೂ ಸರ್ಕಾರದ ಕರ್ತವ್ಯ. ಆದರೆ, ಸರ್ಕಾರ ವಿವಾದಕ್ಕೆ ಪ್ರೇರಪಣೆ ನೀಡಿ ಅಶಾಂತಿ ಸೃಷ್ಟಿಸಿದೆ. ಸಂವಿಧಾನ ಉಳಿಸಬೇಕಿರುವುದು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜನಪ್ರತಿನಿಧಿಗಳ ಜವಾಬ್ದಾರಿ ಎಂದರು.

‘ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸಬೇಕು’ ಎಂಬ ಸಚಿವ ಕೆ.ಎಸ್‌ ಈಶ್ವರಪ್ಪ ಅವರ ಹೇಳಿಕೆಗೆ ಕಿಡಿಕಾರಿದ ಸುರೇಶ್, ಈ ರೀತಿ ಹೇಳಿಕೆ ನೀಡಿರುವ ಸಚಿವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು ಮತ್ತು ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಮುಖ್ಯ ಸಂಯೋಜಕರಾದ ರಘುನಂದನ್, ರಾಮಣ್ಣ, ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್, ಮುಖಂಡರಾದ ಎಚ್.ಕೆ. ಮಹೇಶ್, ದೇವರಾಜೇಗೌಡ, ಬಾಗೂರು ಮಂಜೇಗೌಡ, ಬನವಾಸೆ ರಂಗಸ್ವಾಮಿ, ಸಣ್ಣಸ್ವಾಮಿ, ಎಚ್.ಕೆ. ಜವರೇಗೌಡ, ತಾರಾ ಚಂದನ್, ಎಚ್.ಎಸ್. ಆನಂದ್ ಕುಮಾರ್, ರಂಗಸ್ವಾಮಿ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ರಂಜಿತ್ ಗೊರೂರು, ವಿನೋದ್ ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮನೆಮದ್ದುಗಳನ್ನು ಬಳಸಿಕೊಂಡು ತಲೆನೋವನ್ನು ಹೇಗೆ ಎದುರಿಸುವುದು?

Thu Feb 17 , 2022
ಕಟ್ಟುನಿಟ್ಟಾದ ಗಡುವುಗಳು, ತೀವ್ರವಾದ ಸಭೆಯ ವೇಳಾಪಟ್ಟಿಗಳು ಮತ್ತು ವೃತ್ತಿಪರ ಮತ್ತು ವೈಯಕ್ತಿಕ ಜೀವನವನ್ನು ಒಟ್ಟಿಗೆ ಸಮತೋಲನಗೊಳಿಸುವುದು ತಲೆನೋವಿಗೆ ಕಾರಣವಾಗಬಹುದು. ವೇಗದ ಗತಿಯ ನಗರ ಜೀವನಶೈಲಿಯು ನಿಮ್ಮ ವೃತ್ತಿಜೀವನದಲ್ಲಿ ನಿಮ್ಮನ್ನು ಮುಂದಿಡಬಹುದು ಆದರೆ ನಿಮ್ಮ ಆರೋಗ್ಯದ ಅಪಾಯದಲ್ಲಿದೆ. ಸಾಮಾನ್ಯ ಕಾರ್ಯನಿರತ ದೈನಂದಿನ ದಿನಚರಿಯು ನೋವು ನಿವಾರಕವನ್ನು ತೆಗೆದುಕೊಳ್ಳುವ ತಲೆನೋವಿನೊಂದಿಗೆ ಕೊನೆಗೊಳ್ಳುತ್ತದೆ. ಆದರೆ ದಿನನಿತ್ಯದ ಔಷಧಿಗಳನ್ನು ಸೇವಿಸುವುದರಿಂದ ಅನೇಕ ಅಡ್ಡ ಪರಿಣಾಮಗಳಿಗೆ ಕಾರಣವಾಗಬಹುದು ಮತ್ತು ದೀರ್ಘಾವಧಿಯಲ್ಲಿ ನಿಮ್ಮ ಹೃದಯರಕ್ತನಾಳದ ಆರೋಗ್ಯದ ಮೇಲೆ ಪರಿಣಾಮ […]

Advertisement

Wordpress Social Share Plugin powered by Ultimatelysocial