ಕುಮಾರಸ್ವಾಮಿ, ರೇವಣ್ಣ ಹೊಡೆದಾಡಿಕೊಳ್ಳುತ್ತಾರೆ ಎಂಬುವರಿಗೆ ಭ್ರಮನಿರಸನಹಾಸನ ಕ್ಷೇತ್ರದ ಟಿಕೆಟ್ ಗೊದಲಕ್ಕೆ ಹೆಚ್.ಡಿ.ರೇವಣ್ಣ ತೆರೆ ಹೆಚ್.ಡಿ.ಕುಮಾರಸ್ವಾಮಿಯೇ ನಮ್ಮ ಸರ್ವೋಚ್ಚ ನಾಯಕ, ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎನ್ನುವ ಮೂಲಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ, ರೇವಣ್ಣ ಹೊಡೆದಾಡಿಕೊಳ್ಳುತ್ತಾರೆ ಎಂದು ಕಾಯುತ್ತಿದ್ದವರಿಗೆ ಭ್ರಮಾ ನಿರಸನವಾಗಲಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ, ಜಿಲ್ಲೆಯ ಆರು ಶಾಸಕರು ಕುಳಿತು ಚರ್ಚೆ ಮಾಡುತ್ತಾರೆ ಎಂದು ತಿಳಿಸಿದರು.
https://play.google.com/store/apps/details?id=com.speed.newskannada