ಹೆಚ್.ಡಿ. ಕುಮಾರಸ್ವಾಮಿ ಅವರೇ ಅಲ್ಪಸಂಖ್ಯಾತ ನಿಜವಾದ ವಿರೋಧಿ : ಜಮೀರ್ ಅಹ್ಮದ್ ಖಾನ್

ಸಿದ್ದರಾಮಯ್ಯ ಅವರನ್ನು ಅಲ್ಪಸಂಖ್ಯಾತ ವಿರೋಧಿ ಎಂದು ಟೀಕಿಸುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೇ ಅಲ್ಪಸಂಖ್ಯಾತ ನಿಜವಾದ ವಿರೋಧಿ. ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವುದೇ ಅವರ ಗುರಿಯಾಗಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಂದಗಿ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಹೆಚ್.ಡಿ. ದೇವೇಗೌಡರು ಕೂಡ ಅಲ್ಪಸಂಖ್ಯಾತರ ವಿರೋಧಿಯಲ್ಲ. ಕುಮಾರಸ್ವಾಮಿ ಮಾತ್ರ ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಬಲಿಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಕುಟುಕಿದರು. ಕುಮಾರಸ್ವಾಮಿ ಅವರಿಗೆ ಇದ್ದಕ್ಕಿದ್ದಂತೆ ಉಪ ಚುನಾವಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಉಕ್ಕುತ್ತಿದೆ. ಅಲ್ಪಸಂಖ್ಯಾತರ ಮತಗಳ ವಿಭಜನೆಗಾಗಿ ಉಪ ಚುನಾವಣೆಯಲ್ಲಿ ಸಿಂದಗಿ, ಹಾನಗಲ್ ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ರಾಜಕೀಯವಾಗಿ ಬಲಿಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು. ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವ ಕೆಲಸವನ್ನು ಕುಮಾರಸ್ವಾಮಿ ಹಿಂದಿನಿಂದಲೇ ಮಾಡುತ್ತಾ ಬರುತ್ತಿದ್ದಾರೆ. ಈ ಬಗ್ಗೆ ದೊಡ್ಡ ಇತಿಹಾಸವೇ ಇದೆ ಎಂದು ಹರಿಹಾಯ್ದರು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:
Please follow and like us:

Leave a Reply

Your email address will not be published. Required fields are marked *

Next Post

ಆರ್ಯನ್ ಡ್ರಗ್ ಪ್ರಕರಣದಲ್ಲಿ 18 ಕೋಟಿ ರೂ. ಡೀಲ್.!?

Sun Oct 24 , 2021
ಮಾದಕವಸ್ತು ಹಗರಣದಲ್ಲಿ ಬಂತನಾಗಿರುವ ಬಾಲಿವುಡ್ ನಟ ಶಾರುಖ್‍ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ ಪ್ರಕರಣದಲ್ಲಿ 18 ಕೋಟಿ ರೂ.ಗಳ ಡೀಲ್ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಆರ್ಯನ್ ಖಾನ್ ಪ್ರಕರಣದಲ್ಲಿ ದಿನೇ ದಿನೇ ಹೊಸ ತಿರುವುಗಳು ಎದುರಾಗುತ್ತಿವೆ. ರಾಷ್ಟ್ರೀಯ ಮಾದಕವಸ್ತು ನಿಯಂತ್ರಣ ದಳ(ಎನ್‍ಸಿಬಿ) ಅಕಾರಿ ಸಮೀರ್ ವಾಖಡೆ ವಿರುದ್ಧ ಮಹಾರಾಷ್ಟ್ರದ ಸಚಿವರೊಬ್ಬರು ಗಂಭೀರ ಆರೋಪ ಮಾಡಿದ್ದರು. ಈಗ ಪ್ರಭಾಕರ್ ಸಾಲಿ ಎಂಬುವರು ಹೊಸ ಆರೋಪ ಮಾಡಿದ್ದು, ಖಾಸಗಿ ಪತ್ತೆದಾರ ಕೆ.ಪಿ.ಗೋಸಾವಿ ಮತ್ತು […]

Advertisement

Wordpress Social Share Plugin powered by Ultimatelysocial