ರಾಯಣ್ಣ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ:ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

 

ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿಯಾಗಿಸಿಕೊಂಡು ಕಲ್ಲುತೂರಾಟ ನಡೆಸಲಾಗಿದೆ.ರಾಯಣ್ಣ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.

ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಕುಮಾರಸ್ವಾಮಿ, ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷ ವೈಷಮ್ಯ ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿ ಕದಡಿ ಜನರಲ್ಲಿ ಭಯಭೀತಿ ಉಂಟುಮಾಡಲು ಪುಂಡರನ್ನು ಪ್ರಚೋದಿಸಿದವರನ್ನು ಹೊರಗೆಳೆದು ಶಿಕ್ಷಿಸಬೇಕು. ಈ ಪುಂಡಾಟದ ಹಿಂದೆ ದೊಡ್ಡ ಹುನ್ನಾರವಿದೆ ಎಂದು ಹೇಳಿದ್ದಾರೆ.ಬೆಳಗಾವಿ ವಿವಾದ ಮುಗಿದ ಅಧ್ಯಾಯ. ಆದಾಗ್ಯೂ ಕೆಲ ವಿಚ್ಛಿಧ್ರಕಾರಿ ಶಕ್ತಿಗಳು ಆ ಭಾಗದಲ್ಲಿ ಅಶಾಂತಿ ಸೃಷ್ಟಿಸುತ್ತ ಕನ್ನಡಿಗರು-ಮರಾಠಿಗರ ನಡುವೆ ವೈಷಮ್ಯಕ್ಕೆ ಕಾರಣವಾಗುತ್ತಿದ್ದಾರೆ. ಅಂಥ ಶಕ್ತಿಗಳನ್ನು ಸರ್ಕಾರ ಮೇಲೋತ್ಪಾಟನೆ ಮಾಡಬೇಕು. ಪುಂಡರನ್ನು ಕೂಡಲೇ ಬೇಟೆಯಾಡಿ ಇನ್ನೆಂದು ಇಂಥ ತಪ್ಪು ಮಾಡದಂತೆ ಶಾಸ್ತಿ ಮಾಡಬೇಕು ಎಂದಿದ್ದಾರೆ.ಸರ್ಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರ್ಕಾರವನ್ನೇ ಗುರಿ ಮಾಡಿದಂತೆ.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು. ಬೆಳಗಾವಿಯಲ್ಲಿ ಭಯೋತ್ಪಾದನೆ ಸೃಷ್ಟಿಸುತ್ತಿರುವ ಈ ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ ತಕ್ಕಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿ 144 ಕಲಂ ನಿಷೇಧಾಜ್ಞೆ ಮಧ್ಯೆಯೂ ಶಿವಾಜಿ ಮಹಾರಾಜರ ಮೂರ್ತಿಗೆ ಹಾಲಿನ ಅಭಿಷೇಕ

Sat Dec 18 , 2021
ಶಿವಾಜಿ ಮಹಾರಾಜರ ಮೂರ್ತಿಗೆ ಕಪ್ಪು ಮಸಿ ಬಳಿದಿರುವುದನ್ನು ಖಂಡಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕಿಯರು, ಬಿಜೆಪಿ ಮುಖಂಡ‌ ಕಿರಣ ಜಾಧವ ಸೇರಿದಂತೆ ಅನೇಕರು ಶನಿವಾರ ಬೆಳಗ್ಗೆ ಶಹಾಪುರದ ಛತ್ರಪತಿ ಶಿವಾಜಿ‌ ಮಹಾರಾಜರ ಪ್ರತಿಮೆಗೆ ಕ್ಷೀರಾಭಿಷೇಕ ಮಾಡಿದ್ದಾರೆ.144 ಕಲಂ ನಿಷೇಧಾಜ್ಞೆ ಮಧ್ಯೆಯೂ ಶಿವಾಜಿ ಮಹಾರಾಜರ ಮೂರ್ತಿಗೆ ಹಾಲಿನ ಅಭಿಷೇಕ ಮಾಡಿದರು. ಹಾಲಿನ ಅಭಿಷೇಕ, ಪೂಜೆ ಮಡುವ ನೆಪ ಮಾಡಿ ಗುಂಪು‌ ಕಟ್ಟಿಕೊಂಡು ಬಂದು ಶಾಂತಿ ಕದಡಿಸಲು ಯತ್ನಿಸುತ್ತಿದ್ದಾರೆ.ಎಂಇಎಸ್ ನಾಯಕಿಯರಾದ ಮಾಜಿ ಮೇಯರ್ […]

Advertisement

Wordpress Social Share Plugin powered by Ultimatelysocial