ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ.

ಮುಂಬಯಿ, ಫೆ.05. ಪತ್ನಿ ಮೇಲೆ ಹಲ್ಲೆ ನಡೆಸಿ ನಿಂದಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ ಬಾಂದ್ರಾ ಪೊಲೀಸ್‌ ಠಾಣೆಯಲ್ಲಿ ಎಫ್‌.ಐ.ಆರ್‌ ದಾಖಲಾಗಿದೆ. ಪತ್ನಿ ಆಂಡ್ರಿಯಾ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್‌ 324,504 ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ.

ಕುಡಿದು ಮನೆಗೆ ಬಂದ ವಿನೋದ್ ಕಾಂಬ್ಳಿ ಪತ್ನಿಯನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಇದಾದ ಬಳಿಕ ಸಿಟ್ಟಿನಲ್ಲಿ ಅಡುಗೆಯ ಕಾವಲಿಯನ್ನು ಪತ್ನಿಯ ಮೇಲೆ ಎಸೆದಿದ್ದಾನೆ. ಇದರಿಂದ ಪತ್ನಿ ಆಂಡ್ರಿಯಾ ತಲೆಗೆ ಗಾಯವಾಗಿದೆ. 12 ವರ್ಷದ ಮಗ ತಂದೆಯನ್ನು ತಡೆಯಲು ಯತ್ನಿಸಿದ್ದಾನೆ. ಇದರ ಬಳಿಕವೂ ಕುಡಿದ ಮತ್ತಿನಲ್ಲಿ ಬ್ಯಾಟ್‌ ನಿಂದ ಹಲ್ಲೆ ನಡೆಸಿದ್ದಾರೆ ಎಂದು ಪತ್ನಿ ದೂರಿನಲ್ಲಿ ಹೇಳಿದ್ದಾರೆ.‌ ಗಾಯಗೊಂಡ ಆಂಡ್ರಿಯಾ ಚಿಕಿತ್ಸೆ ಪಡೆದು ಪೊಲೀಸ್‌ ಠಾಣೆಯಲ್ಲಿ ಪತಿ ವಿರುದ್ಧ ದೂರು ದಾಖಲಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾದಕ ವಸ್ತು ಸಾಗಾಟ ಪ್ರಕರಣ .

Sun Feb 5 , 2023
ಮಂಜೇಶ್ವರ, ಫೆ.05. ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕೂಳೂರಿ ನ ಮುಹಮ್ಮದ್ ನೌಫಾಲ್ (33) ಮತ್ತು ತಲಪಾಡಿ ನೇರ್ಲಪ್ಪಾಡಿ ಯ ಕೆ. ಬಿ ಫೈಝಲ್ (26) ಬಂಧಿತರು. ಇವರು ಎಂಡಿಎಂಎ ಮಾದಕ ವಸ್ತು ಸಾಗಾಟದ ಏಜೆಂಟ್ ಗಳೆಂದು ಪೊಲೀಸರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಮಂಜೇಶ್ವರ ಪೊಲೀಸರು ಮೂವರನ್ನು ಎಂ ಡಿ ಎಂ ಎ ಮಾದಕ ವಸ್ತು ಸಹಿತ ಪೊಲೀಸರು […]

Advertisement

Wordpress Social Share Plugin powered by Ultimatelysocial