ಗುಂಡಿನ ದಾಳಿಗೆ ಗುರಿಯಾಗಿದ್ದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ನಿಧನ.

ಭುವನೇಶ್ವರ: ಗುಂಡೇಟಿನಿಂದ ಗಾಯಗೊಂಡಿದ್ದ ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್(61) ಕೊನೆಯುಸಿರೆಳೆದಿದ್ದಾರೆ. ಝಾರ್ಸುಗುಡಾ ಜಿಲ್ಲೆಯ ಬ್ರಜರಾಜ ನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಎಎಸ್‌ಐನಿಂದ ಗುಂಡೇಟಿಗೆ ಒಳಗಾಗಿದ್ದ ಸಚಿವ ನಬಾ ಕಿಶೋರ್ ದಾಸ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಝಾರ್ಸುಗುಡಾ ಜಿಲ್ಲೆಯಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್‌ ಗೋಪಾಲ್ ದಾಸ್ ಸಚಿವರ ಮೇಲೆ ಗುಂಡು ಹಾರಿಸಿದ್ದು,

ಅವರ ಎದೆಗೆ ಗುಂಡು ತಾಗಿ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಭಾನುವಾರ ಭುವನೇಶ್ವರದ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಾಂಧಿ ಚೌಕದಲ್ಲಿ ನಬಾ ದಾಸ್ ತನ್ನ ಕಾರಿನಿಂದ ಇಳಿದಾಗ ಗೋಪಾಲ್ ದಾಸ್ ಕನಿಷ್ಠ ನಾಲ್ಕರಿಂದ ಐದು ಗುಂಡುಗಳನ್ನು ಹಾರಿಸಿದ್ದಾನೆ. ಬ್ರಜರಾಜನಗರ ಪಟ್ಟಣದಲ್ಲಿ ಸಚಿವರು ಸಭೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆರೋಪಿ ಎಎಸ್‌ಐ ಗೋಪಾಲ್ ದಾಸ್ ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆತ ಮಾನಸಿಕವಾಗಿ ಸರಿ ಇರಲಿಲ್ಲ ಎಂದು ಹೇಳಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪುತ್ತೂರು ಕಂಬಳದಲ್ಲಿ ಬಿಗ್‌ಬಾಸ್‌ ಖ್ಯಾತಿಯ ಸಾನಿಯಾಗೆ ಅವಮಾನ.

Mon Jan 30 , 2023
ಜಿಲ್ಲೆಯ ಪುತ್ತೂರು ತಾಲೂಕಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ 30ನೇ ವರ್ಷದ ಕೋಟಿಚೆನ್ನಯ್ಯ ಜೋಡುಕರೆ ಕಂಬಳ ಕೂಟ ಅದ್ದೂರಿಯಾಗಿ ನಡೆಯಿತು. ಈ ವೇಳೆ ಸೆಲ್ಫಿ ನೆಪದಲ್ಲಿ ಅಭಿಮಾನಿಯೋರ್ವ ಬಿಗ್‌ಬಾಸ್‌ ಖ್ಯಾತಿಯ ಸಾನಿಯಾ ಅಯ್ಯರ್ ಅವರ ಕೈ ಹಿಡಿದು ಎಳೆದ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.ಕೋಟಿಚೆನ್ನಯ್ಯ ಜೋಡುಕರೆ ಕಂಬಳ ಕೂಟಕ್ಕೆ ಶನಿವಾರ ರಾತ್ರಿ ವಿಶೇಷ ಅಹ್ವಾನಿತರಾಗಿ ಬಿಗ್ ಬಾಸ್ ಖ್ಯಾತಿಯ ಸಾನಿಯಾ ಅಯ್ಯರ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಾಷಣ […]

Advertisement

Wordpress Social Share Plugin powered by Ultimatelysocial