ಹಠಾತ್ ಹೃದಯಾಘಾತ: ಆಂಧ್ರಪ್ರದೇಶ ಕೈಗಾರಿಕಾ ಸಚಿವ ಮೇಕಪಾಟಿ ಗೌತಮರೆಡ್ಡಿ ನಿಧನ

ವಿಜಯವಾಡ: ಆಂಧ್ರ ಪ್ರದೇಶ ಸರ್ಕಾರದ ಕೈಗಾರಿಕ ಸಚಿವ ಮೇಕಪತಿ ಗೌತಮರೆಡ್ಡಿ (50) ಸೋಮವಾರ ನಿಧನರಾಗಿದ್ದಾರೆ.ಗೌತಮ್ ರೆಡ್ಡಿ ನೆಲ್ಲೂರು ಜಿಲ್ಲೆಯಿಂದ ಎರಡನೇ ಬಾರಿ ಶಾಸಕರಾಗಿದ್ದ ಅವರು, ಒಂದು ವಾರದ ಹಿಂದಷ್ಟೇ ದುಬೈ ಎಕ್ಸ್​ಪೋದಲ್ಲಿ ಪಾಲ್ಗೊಂಡು ವಿವಿಧ ಕಂಪನಿಗಳ ಜೊತೆ ಆಂಧ್ರಪ್ರದೇಶದಲ್ಲಿ ಹೂಡಿಕೆ ಮಾಡುವ ಒಪ್ಪಂದ ಮಾಡಿಕೊಂಡಿದ್ದರು, ಫೆಬ್ರವರಿ 20ರಂದು ದುಬೈಯಿಂದ ಹೈದರಾಬಾದ್​ಗೆ ಬಂದಿದ್ದರು.ಮಾಜಿ ಸಂಸದ ಮೇಕಪತಿ ರಾಜಮೋಹನ್​ ರೆಡ್ಡಿ ಅವರ ಪುತ್ರರಾದ ಗೌತಮ್ ​ರೆಡ್ಡಿ ನೆಲ್ಲೂರು ಜಿಲ್ಲೆಯ ಆತ್ಮಾಕೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.ಗೌತಮ್​ ರೆಡ್ಡಿ ಅವರಿಗೆ ಇಂದು ಬೆಳಗ್ಗೆ ಅಸ್ವಸ್ಥರಾಗಿದ್ದಾರೆ. ಈ ವೇಳೆ ಜೂಬ್ಲಿ ಹಿಲ್ಸ್​ನ ಅಪೋಲೋ ಆಸ್ಪತ್ರೆಗೆ ರವಾನೆ ಮಾಡುತ್ತಿರುವಗಲೇ ದಾರಿಮಧ್ಯೆಯೇ ಅವರು ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.ಆಂಧ್ರ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ರಾಜ್ಯದ ಕೈಗಾರಿಕೆ ಮತ್ತು ಐಟಿ ಸಚಿವ ಮೇಕಪತಿ ಗೌತಮ್ ರೆಡ್ಡಿ ಅವರ ಅಕಾಲಿಕ ನಿಧನಕ್ಕೆ ತೀವ್ರ ಆಘಾತ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

2022 ರಲ್ಲಿ ದಾದಾಸಾಹೇಬ್ ಫಾಲ್ಕೆ ಅವಾರ್ಡ್ಸ್ ಪಡೆದ, ಅಲ್ಲು ಅರ್ಜುನ್ ಅವರ ಪುಷ್ಪಾ ಮತ್ತು ರಣವೀರ್ ಸಿಂಗ್ !!

Mon Feb 21 , 2022
ಫೆಬ್ರವರಿ 20 ರಂದು ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2022, ಗ್ಲಿಟ್ಜ್ ಮತ್ತು ಗ್ಲಾಮರ್ ತುಂಬಿದ ಕಾರ್ಯಕ್ರಮವಾಗಿತ್ತು. ಚಿತ್ರೋತ್ಸವದಲ್ಲಿ ಅಲ್ಲು ಅರ್ಜುನ್ ಅವರ ಪುಷ್ಪ: ದಿ ರೈಸ್, ಸಿದ್ಧಾರ್ಥ್ ಮಲ್ಹೋತ್ರಾ ಅವರ ಶೇರ್ಷಾ ಮತ್ತು ವಿಕ್ಕಿ ಕೌಶಲ್ ಅವರ ಸರ್ದಾರ್ ಉದಾಮ್ ಅವರನ್ನು ಗೌರವಿಸಲಾಯಿತು. ನಿರ್ದೇಶಕ ಕಬೀರ್ ಖಾನ್ ಅವರ 83 ಚಿತ್ರದಲ್ಲಿನ ಅಸಾಧಾರಣ ಅಭಿನಯಕ್ಕಾಗಿ ರಣವೀರ್ ಸಿಂಗ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದರು. ಅವರು […]

Advertisement

Wordpress Social Share Plugin powered by Ultimatelysocial