ಬಂಗಾಳಕೊಲ್ಲಿಯಲ್ಲಿ ವಾಯುಭಾರದ ಕುಸಿತದಿಂದಾಗಿ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗಿದೆ. ಕೇರಳದಿಂದ ಮಹಾರಾಷ್ಟ್ರ ತನಕ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಅನೇಕ ಕಡೆಗಳಲ್ಲಿ ಭಾರಿ ಮಳೆ ಸುರಿದಿದೆ. ಲಘು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇನ್ನೆರಡು ದಿನ ಉತ್ತರ ಕರ್ನಾಟಕದಲ್ಲಿ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆಯೇ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಇದರಿಂದಾಗಿ ಕೈಗೆ ಬಂದ ಸಜ್ಜೇ ಮತ್ತು ಜೋಳ, ಮೆಣಸಿನಕಾಯಿ ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣವಾಗಿ ಮಳೆಗೆ ಹಾನಿಗೀಡಾಗಿದ್ದು ರೈತಾಪಿ ವರ್ಗ ಪಶ್ಚಾತಾಪ ಪಡುವಂತಾಗಿದೆ.
ಇದನ್ನೂ ಓದಿ:ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ