ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಚೊಕ್ಕನಹಳ್ಳಿಯ ಕೆರೆ ಕಟ್ಟೆ ಒಡೆದ ಪರಿಣಾಮ ಹಾನಿ ಸಂಭವಿಸಿದದೆ. ಕುಶಾವತಿ ನದಿ ತುಂಬಿ ಹರಿದ ಪರಿಣಾಮ ಬಟ್ಲಹಳ್ಳಿ ಮುಖ್ಯರಸ್ತೆ ಬಂದ್ ಆಗಿದೆ.ಇನ್ನು ಭಾರಿ ಮಳೆಯಿಂದ ಹಲವೆಡೆ ಅಪಾರ ಹಾನಿ ಸಂಭವಿಸಿದ್ದು. ಇನ್ನು ಚೊಕ್ಕನಹಳ್ಳಿ ಗ್ರಾಮದ ನಾರಾಯಣರೆಡ್ಡಿ ಕೆರೆ ಕಟ್ಟೆ ಒಡೆದು ಅಪಾರ ಬೆಳೆ ನೀರುಪಾಲಾಗಿದೆ. ಭತ್ತ, ರಾಗಿ, ಕಡಲೇಕಾಯಿ ಸೇರಿ ಅಪಾರ ಬೆಳೆ ನೀರುಪಾಲಾಗಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಮುಖ್ಯರಸ್ತೆ ಬಂದ್ ಆಗಿದ್ದು. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಹಳ್ಳಿಗಳಾದ ಬ್ರಾಹ್ಣಣರಹಳ್ಳಿ, ಬೊಮ್ಮಲಾಕಪುರ, ವೈ ಗೊಲ್ಲಹಳ್ಳಿ, ಮಾದಮಂಗಲ, ಕೊನಪ್ಪಲ್ಲಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ.
ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :
https://play.google.com/store/apps/details?id=com.speed.newskannada