ಹೇಡಿಗಳ ಅಟ್ಟಹಾಸಕ್ಕೆ ಹಿಂದೂ ಕಾರ್ಯಕರ್ತ ಬಲಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡನೆ

 

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೇಡಿಗಳ ಅಟ್ಟಹಾಸಕ್ಕೆ ಹಿಂದೂ ಕಾರ್ಯಕರ್ತ ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಸಚಿವ ಪ್ರಹ್ಲಾದ್ ಜೋಶಿ, ಶಿವಮೊಗ್ಗದಲ್ಲಿ ಹೇಡಿಗಳ ಅಟ್ಟಹಾಸಕ್ಕೆ ಹಿಂದೂ ಕಾರ್ಯಕರ್ತ ಹತ್ಯೆಯಾಗಿದ್ದನ್ನು ಖಂಡಿಸುತ್ತೇನೆ.ಕೃತ್ಯ ಎಸಗಿದ ಅಪರಾಧಿಗಳನ್ನು ಆದಷ್ಟು ಬೇಗ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ. ಹತ್ಯೆಯಾದ ಯುವಕ ಹರ್ಷ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.ನಿನ್ನೆ ರಾತ್ರಿ 9:30ರ ಸುಮಾರಿನಲ್ಲಿ ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಲ್ಲಿ ಬಿದ್ದಿದ್ದ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಕಾರ್ಯಕರ್ತನ ಕಗ್ಗೊಲೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಇಂದು ನನ್ನ ಸ್ನಾನಗೃಹವು ನಾನು ಹಿಂದೆ ವಾಸಿಸುತ್ತಿದ್ದ ಮನೆಯಷ್ಟು ದೊಡ್ಡದಾಗಿದೆ' !

Tue Feb 22 , 2022
ಮುಂಬೈನಲ್ಲಿ ಬಂಗಲೆ ಹೊಂದಲು ಬಾಲಿವುಡ್ ತಾರೆಯರ ಪಟ್ಟಿಗೆ ನವಾಜುದ್ದೀನ್ ಸಿದ್ದಿಕಿ ಇತ್ತೀಚೆಗೆ ಸೇರಿಕೊಂಡರು. ಮೂರು ವರ್ಷಗಳಲ್ಲಿ ತನ್ನ ಹೊಸ ಅರಮನೆಯ ಬಂಗಲೆಯನ್ನು ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ನಟ, ಇತ್ತೀಚೆಗೆ ನಗರದಲ್ಲಿನ ತನ್ನ ಹಿಂದಿನ ಮನೆಗಳಿಗೆ ಎಷ್ಟು ವಿಭಿನ್ನವಾಗಿದೆ ಎಂಬುದರ ಕುರಿತು ಮಾತನಾಡಿದರು. ಅವರು 2012 ರಲ್ಲಿ ಗ್ಯಾಂಗ್ಸ್ ಆಫ್ ವಸ್ಸೆಪುರ್‌ನೊಂದಿಗೆ ದೊಡ್ಡದನ್ನು ಮಾಡುವ ಮೊದಲು, ನವಾಜುದ್ದೀನ್ ಒಂದು ದಶಕದಿಂದ ಬಾಲಿವುಡ್‌ನಲ್ಲಿ ಹೆಜ್ಜೆ ಹಾಕಲು ಹೆಣಗಾಡಿದರು. ಈ ಸಮಯದಲ್ಲಿ, ನಟ ಹಲವಾರು […]

Advertisement

Wordpress Social Share Plugin powered by Ultimatelysocial