ಬೈಕಿನಲ್ಲಿ ಹೋಗುವಾಗ ಹೆಜ್ಜೇನು ದಾಳಿ;

ವ್ಯಕ್ತಿಯೊಬ್ಬರು ಬೈಕಿನಲ್ಲಿ ಹೋಗುವಾಗ ಹೆಜ್ಜೇನು ದಾಳಿ ನಡೆಸಿದ್ದು, ಮತ್ತೊಬ್ಬರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.

ಹುಲಿಕಲ್ ನ ಮೂರ್ತಿ ಪೂಜಾರ್ ಎಂಬವರು ಮಾರುತಿಪುರ ಸಮೀಪದ ಹೊಸ ಕೆಸರೆಯಲ್ಲಿರುವ ಪತ್ನಿ ಮನೆಗೆ ಬೈಕಿನಲ್ಲಿ ಹೋಗುವಾಗ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ.

ಇದರಿಂದ ಆಘಾತಗೊಂಡ ಅವರು ಕಿರುಚಲು ಆರಂಭಿಸಿದ್ದಾರೆ.

ಕೂಡಲೇ ಅಲ್ಲಿಯೇ ಇದ್ದ ಮಹಮದ್ ಗೌಸ್ ಎಂಬವರು ತಮ್ಮ ಜೀವದ ಹಂಗು ತೊರೆದು ಮೂರ್ತಿ ಪೂಜಾರ್ ಅವರಿಗೆ ಕಂಬಳಿ ಹೊದಿಸಿ ಮಾರುತಿಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ.

ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂರ್ತಿ ಪೂಜಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮ್ಮ ಮೇಲೂ ಹೆಜ್ಜೇನುಗಳು ದಾಳಿ ನಡೆಸುತ್ತಿದ್ದರೂ ಅದನ್ನು ಲೆಕ್ಕಿಸದೆ ಮೂರ್ತಿ ಪೂಜಾರ್ ಅವರನ್ನು ರಕ್ಷಿಸಿದ ಮಹಮದ್ ಗೌಸ್ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗುತ್ತಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಲೋಕಾಯುಕ್ತರು ದಾಳಿ ಮಾಡುವುದಕ್ಕಿಂತ ಅರ್ಧ ಗಂಟೆ ಮೊದಲು ಅಪರಿಚಿತನೊಬ್ಬ ನಮ್ಮ ಕಚೇರಿಯಲ್ಲಿ ಹಣ ಇರಿಸಿ ಹೋಗಿದ್ದ !

Wed Mar 8 , 2023
ದಾವಣಗೆರೆ : ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದ ನಂತರ ಚನ್ನೇಶಪುರದಲ್ಲಿ ಪ್ರತ್ಯಕ್ಷವಾದ ಮಾಡಾಳ್​ ವಿರೂಪಾಕ್ಷಪ್ಪ ನನ್ನ ವಿರುದ್ಧ ಪಿತೂರಿ ನಡೆದಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಾಡಾಳ್​ ವಿರೂಪಾಕ್ಷಪ್ಪ ಮಾತನಾಡಿ ‘ಲೋಕಾಯುಕ್ತರು ದಾಳಿ ಮಾಡುವುದಕ್ಕಿಂತ ಅರ್ಧ ಗಂಟೆ ಮೊದಲು ಅಪರಿಚಿತನೊಬ್ಬ ನಮ್ಮ ಕಚೇರಿಯಲ್ಲಿ ಹಣ ಇರಿಸಿ ಹೋಗಿದ್ದ ಎಂದಿದ್ದಾರೆ. ‘ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ರೂಪಿಸಿ ಇಲ್ಲಸಲ್ಲದ ಆರೋಪ ಹೊರಿಸಲಾಗಿದೆ. ನಮ್ಮ ಭಾಗದಲ್ಲಿ ಅಡಿಕೆ ತೋಟ ಹೊಂದಿರುವವರ ಮನೆಗಳಲ್ಲಿ ಕೋಟಿಗಟ್ಟಲೆ ಹಣ […]

Advertisement

Wordpress Social Share Plugin powered by Ultimatelysocial