ವ್ಯಕ್ತಿಯೊಬ್ಬರು ಬೈಕಿನಲ್ಲಿ ಹೋಗುವಾಗ ಹೆಜ್ಜೇನು ದಾಳಿ ನಡೆಸಿದ್ದು, ಮತ್ತೊಬ್ಬರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ಹುಲಿಕಲ್ ನ ಮೂರ್ತಿ ಪೂಜಾರ್ ಎಂಬವರು ಮಾರುತಿಪುರ ಸಮೀಪದ ಹೊಸ ಕೆಸರೆಯಲ್ಲಿರುವ ಪತ್ನಿ ಮನೆಗೆ ಬೈಕಿನಲ್ಲಿ ಹೋಗುವಾಗ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ.
ಇದರಿಂದ ಆಘಾತಗೊಂಡ ಅವರು ಕಿರುಚಲು ಆರಂಭಿಸಿದ್ದಾರೆ.
ಕೂಡಲೇ ಅಲ್ಲಿಯೇ ಇದ್ದ ಮಹಮದ್ ಗೌಸ್ ಎಂಬವರು ತಮ್ಮ ಜೀವದ ಹಂಗು ತೊರೆದು ಮೂರ್ತಿ ಪೂಜಾರ್ ಅವರಿಗೆ ಕಂಬಳಿ ಹೊದಿಸಿ ಮಾರುತಿಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ.
ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂರ್ತಿ ಪೂಜಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮ್ಮ ಮೇಲೂ ಹೆಜ್ಜೇನುಗಳು ದಾಳಿ ನಡೆಸುತ್ತಿದ್ದರೂ ಅದನ್ನು ಲೆಕ್ಕಿಸದೆ ಮೂರ್ತಿ ಪೂಜಾರ್ ಅವರನ್ನು ರಕ್ಷಿಸಿದ ಮಹಮದ್ ಗೌಸ್ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada