ಅಗ್ನಿವೀರರಾಗಲು ಬಯಸುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಗ್ನಿವೀರರಾಗಲು ಬಯಸುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ಅಭ್ಯರ್ಥಿಗಳು ಮೊದಲಿಗೆ ಆನ್ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ.

ಇದಾದ ನಂತರ ದೈಹಿಕ ಕ್ಷಮತೆ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಯಲಿದ್ದು, ಈ ಕುರಿತಂತೆ ಭಾರತೀಯ ಸೇನೆ ಇಂದು ಜಾಹೀರಾತು ಬಿಡುಗಡೆ ಮಾಡಿದೆ.

ನೂತನ ನಿಯಮ ಈಗಾಗಲೇ ಆಯ್ಕೆಯಾಗಿರುವವರಿಗೆ ಹಾಗೂ ಮಾರ್ಚ್ ಮೊದಲ ವಾರ ಸೇನೆ ಸೇರಲಿರುವವರಿಗೆ ಅನ್ವಯವಾಗುವುದಿಲ್ಲ.

2023-24ರಲ್ಲಿ ಸೇನೆ ಸೇರಲು ಬಯಸಿರುವ 40,000 ಅಭ್ಯರ್ಥಿಗಳಿಗೆ ಹೊಸ ನಿಯಮ ಅನ್ವಯವಾಗಲಿದ್ದು, ಈ ಮೊದಲು ವೈದ್ಯಕೀಯ ಪರೀಕ್ಷೆ ನಡೆದ ನಂತರ ದೈಹಿಕ ಕ್ಷಮತೆ ಪರೀಕ್ಷೆ ನಡೆಸಲಾಗುತ್ತಿತ್ತು. ಇದಾದ ಬಳಿಕ ಅಂತಿಮವಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕಾಗಿತ್ತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪತ್ನಿಯ ಮೃತದೇಹವನ್ನು ಹೊಲದಲ್ಲಿ ಹೂತು ಅದರ ಮೇಲೆ ರಾಗಿ ಬೇಸಾಯ ಮಾಡಿದ ಪತಿ!

Sat Feb 4 , 2023
ಘಾಜಿಯಾಬಾದ್ (ಉತ್ತರ ಪ್ರದೇಶ): ಅಕ್ರಮ ಸಂಬಂಧ ಶಂಕೆಯಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಹೊಲದಲ್ಲಿ ಗುಂಡಿ ತೆಗೆದು 30 ಕೆಜಿ ಉಪ್ಪು ಹಾಕಿ ಹೂತಿದ್ದಾನೆ. ಅಷ್ಟೇ ಅಲ್ಲದೇ, ಅದೇ ಜಾಗದಲ್ಲಿ ರಾಗಿ ಬೇಸಾಯ ಕೂಡ ಮಾಡಿದ್ದಾನೆ. ಈ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ. ನಾಪತ್ತೆ ಪ್ರಕರಣ ದಾಖಲಿಸಿದ ಪತಿ ಜನವರಿ 29 ರಂದು ಆರೋಪಿ ಪತಿ ದಿನೇಶ್ ತನ್ನ ಹೆಂಡತಿ ಅಂಜು ಜನವರಿ 26ರ ಬೆಳಿಗ್ಗೆ 5 ಗಂಟೆಯಿಂದ ಇದ್ದಕ್ಕಿದ್ದಂತೆ ಎಲ್ಲೋ […]

Advertisement

Wordpress Social Share Plugin powered by Ultimatelysocial