ಕರ್ನಾಟಕ ವಿಧಾನ ಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಜನರ ಮನ ಗೆಲ್ಲಲು ಬಜೆಟ್ ಅನ್ನೇಅಸ್ತ್ರವಾಗಿ ಪ್ರಯೋಗಿಸಲು ಸಿಎಂ ಬಸವರಾಜ ಬೊಮ್ಮಾಯಿಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಬಂಪರ್ ಬಜೆಟ್ ಮಂಡನೆಯಾಗುವ ನಿರೀಕ್ಷೆ ಜನರಲ್ಲಿದೆ. ರಾಜ್ಯದ ಹಣಕಾಸು ಸಚಿವರೂ ಆಗಿರುವ ಬೊಮ್ಮಾಯಿ ಇಂದು ಬೆಳಗ್ಗೆ 10.15ಕ್ಕೆ ಬಿಜೆಪಿ ಸರ್ಕಾರದ ಕೊನೇ ಹಾಗೂ 2ನೇ ಬಜೆಟ್ ಮಂಡಿಸಲಿದ್ದಾರೆ. ಇನ್ನೇನು ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಜನರ ಮೇಲೆ ಹೊಸ ತೆರಿಗೆ ಹೊರೆ ಹಾಕದೆ, ಜನರನ್ನು ತಮ್ಮತ್ತ ಸೆಳೆಯುವ ಜನಪ್ರಿಯ ಯೋಜನೆಗಳನ್ನು, ಘೋಷಣೆಗಳನ್ನೊಳಗೊಂಡ ಬಜೆಟ್ ಮಂಡಿಸುವತ್ತ ಸಿಎಂ ಬಸವರಾಜ ಬೊಮ್ಮಾಯಿ ಗಮನ ಹರಿಸಿದ್ದಾರೆ ಎನ್ನಲಾಗಿದೆ.
ಸಾಮಾನ್ಯವಾಗಿ ಚುನಾವಣಾ ವರ್ಷದಲ್ಲಿ ಮಂಡಿಸೋ ಬಜೆಟ್ಗಳು ಜನಪ್ರಿಯ ಬಜೆಟ್ಗಳೇ ಆಗಿರುತ್ತವೆ. ಬಜೆಟ್ನಲ್ಲಿ ಸಾಮಾನ್ಯ ಜನರಿಗೆ, ಕೃಷಿಕರಿಗೆ, ಮಹಿಳೆಯರಿಗೆ, ಯುವಕರಿಗೆ ಭರ್ಜರಿ ಕೊಡುಗೆಗಳನ್ನು ನೀಡಲಾಗುತ್ತದೆ. ಹೀಗಾಗಿ, ಇಂದು ಸಿಎಂ ಬೊಮ್ಮಾಯಿ ಮಂಡಿಸೋ ಜನಪರ ಬಜೆಟ್ ಆಗಿರುತ್ತಾ? ಜನಪ್ರಿಯ ಘೋಷಣೆಗಳ ಬಜೆಟ್ ಆಗಿರುತ್ತಾ ಅನ್ನೋ ಕುತೂಹಲವೂ ಇದೆ. ಕಳೆದ ಸಾಲಿನಲ್ಲಿ 2.7 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿತ್ತು. ಈ ಬಾರಿ ಬಜೆಟ್ನ ಮೊತ್ತ 3 ಲಕ್ಷ ಕೋಟಿಗೂ ಅಧಿಕವಾಗಲಿದೆ ಅಂತಾ ಹೇಳಲಾಗುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada