ಬಜೆಟ್​ನ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

ರ್ನಾಟಕ ಬಜೆಟ್​ 2023-24 Live: ಬಜೆಟ್​ನಲ್ಲಿ ಜನ ಸಾಮಾನ್ಯರಿಗೆ, ಕೃಷಿಕರಿಗೆ, ಮಹಿಳೆಯರಿಗೆ, ಯುವಕರಿಗೆ ಭರ್ಜರಿ ಕೊಡುಗೆಗಳನ್ನು ನೀಡಬಹುದು, ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡಬಹುದು ಎಂಬ ನಿರೀಕ್ಷೆ ಇದೆ. ಬಜೆಟ್​ನ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

ಕರ್ನಾಟಕ ವಿಧಾನ ಸಭಾ ಚುನಾವಣೆ  ಗಮನದಲ್ಲಿಟ್ಟುಕೊಂಡು ಜನರ ಮನ ಗೆಲ್ಲಲು ಬಜೆಟ್ ಅ​ನ್ನೇಅಸ್ತ್ರವಾಗಿ ಪ್ರಯೋಗಿಸಲು ಸಿಎಂ ಬಸವರಾಜ ಬೊಮ್ಮಾಯಿಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಬಂಪರ್ ಬಜೆಟ್ ಮಂಡನೆಯಾಗುವ ನಿರೀಕ್ಷೆ ಜನರಲ್ಲಿದೆ. ರಾಜ್ಯದ ಹಣಕಾಸು ಸಚಿವರೂ ಆಗಿರುವ ಬೊಮ್ಮಾಯಿ ಇಂದು ಬೆಳಗ್ಗೆ 10.15ಕ್ಕೆ ಬಿಜೆಪಿ ಸರ್ಕಾರದ ಕೊನೇ ಹಾಗೂ 2ನೇ ಬಜೆಟ್ ಮಂಡಿಸಲಿದ್ದಾರೆ. ಇನ್ನೇನು ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಜನರ ಮೇಲೆ ಹೊಸ ತೆರಿಗೆ ಹೊರೆ ಹಾಕದೆ, ಜನರನ್ನು ತಮ್ಮತ್ತ ಸೆಳೆಯುವ ಜನಪ್ರಿಯ ಯೋಜನೆಗಳನ್ನು, ಘೋಷಣೆಗಳನ್ನೊಳಗೊಂಡ ಬಜೆಟ್ ಮಂಡಿಸುವತ್ತ ಸಿಎಂ ಬಸವರಾಜ ಬೊಮ್ಮಾಯಿ ಗಮನ ಹರಿಸಿದ್ದಾರೆ ಎನ್ನಲಾಗಿದೆ.

ಸಾಮಾನ್ಯವಾಗಿ ಚುನಾವಣಾ ವರ್ಷದಲ್ಲಿ ಮಂಡಿಸೋ ಬಜೆಟ್​ಗಳು ಜನಪ್ರಿಯ ಬಜೆಟ್​ಗಳೇ ಆಗಿರುತ್ತವೆ. ಬಜೆಟ್​ನಲ್ಲಿ ಸಾಮಾನ್ಯ ಜನರಿಗೆ, ಕೃಷಿಕರಿಗೆ, ಮಹಿಳೆಯರಿಗೆ, ಯುವಕರಿಗೆ ಭರ್ಜರಿ ಕೊಡುಗೆಗಳನ್ನು ನೀಡಲಾಗುತ್ತದೆ. ಹೀಗಾಗಿ, ಇಂದು ಸಿಎಂ ಬೊಮ್ಮಾಯಿ ಮಂಡಿಸೋ ಜನಪರ ಬಜೆಟ್ ಆಗಿರುತ್ತಾ? ಜನಪ್ರಿಯ ಘೋಷಣೆಗಳ ಬಜೆಟ್ ಆಗಿರುತ್ತಾ ಅನ್ನೋ ಕುತೂಹಲವೂ ಇದೆ. ಕಳೆದ ಸಾಲಿನಲ್ಲಿ 2.7 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿತ್ತು. ಈ ಬಾರಿ ಬಜೆಟ್​ನ ಮೊತ್ತ 3 ಲಕ್ಷ ಕೋಟಿಗೂ ಅಧಿಕವಾಗಲಿದೆ ಅಂತಾ ಹೇಳಲಾಗುತ್ತಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೀದಿ ನಾಯಿ ದತ್ತುಗೆ ಆನ್‌ಲೈನ್‌ ಪೋರ್ಟಲ್‌ ಘೋಷಿಸಿದ ಶ್ವಾನ ಪ್ರಿಯ ಸಿಎಂ

Fri Feb 17 , 2023
ಬೆಂಗಳೂರು: ಪ್ರಾಣಿಗಳ ಸಾಕಣೆ ಹಾಗೂ ಅಭಿವೃದ್ಧಿಯಲ್ಲಿ ನಿರ್ದಿಷ್ಟವಾಗಿ ಶ್ವಾನದ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ವಿಶೇಷ ಆಸಕ್ತಿ ತೋರಿದ್ದಾರೆ. ಕರ್ನಾಟಕದ ಪ್ರಮುಖ ತಳಿಯಲ್ಲೊಂದಾದ ಮುಧೋಳ್‌ ಹೌಂಡ್‌ ಅಭಿವೃದ್ಧಿಗೆ 5 ಕೋಟಿ ರೂ. ನೀಡಲು ಬೊಮ್ಮಾಯಿ ಪ್ರಸ್ತಾವಿಸಿದ್ದಾರೆ. ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20,000 ಫಲಾನುಭವಿಗಳಿಗೆ 355 ಕೋಟಿ ರೂ. ಗಳ ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು. ರೈತ ಮಹಿಳೆಯರಲ್ಲಿ ಕೋಳಿ ಸಾಕಾಣಿಕೆಯನ್ನು […]

Advertisement

Wordpress Social Share Plugin powered by Ultimatelysocial