ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ಇಬ್ಬರು ವಿದ್ಯಾರ್ಥಿಗಳು ಮೈಸೂರಿನಲ್ಲಿ ನಡೆದ ಭೀಕರ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ.ಮೈಸೂರು: ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮೈಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.ಮಂಗಳವಾರ ತಡರಾತ್ರಿ ಕಾರು ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಮೌಳೇಶ್ವರ ರೆಡ್ಡಿ, ಸುಹಾನ್, ತೇಜಸ್ ಹಾಗೂ ಶುಭಂಕರ ಎಂಬುವವರು ಕಾರಿನಲ್ಲಿದ್ದರು.ಕಾರಿನಲ್ಲಿ ಮೈಸೂರಿನ ಕಡೆಗೆ ಬರುತ್ತಿದ್ದಾಗ ಬಿಳಿಕೆರೆ ಬಳಿಯ ರಾಮೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಿಂದ ಕಾರಿನಲ್ಲಿದ್ದ ಮೌಳೇಶ್ವರ ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ತೇಜಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಈ ವಿದ್ಯಾರ್ಥಿಗಳು ಮೂಲತಃ ಶಿವಮೊಗ್ಗ, ಬೆಂಗಳೂರು, ಹಾಗೂ ಅರಸೀಕೆರೆಗೆ ಸೇರಿದವರಾಗಿದ್ದಾರೆ ಎಂದು ತಿಳಿದುಬಂದಿದೆ.ವಿದ್ಯಾರ್ಥಿಗಳ ಮೃತದೇಹವನ್ನು ಕೆ.ಆರ್. ಆಸ್ಪತ್ರೆಗೆ ಕಳುಹಿಸಲಾಗಿದ್ದು, ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ನಗರದ ಡಿಆರ್​ಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೊಬೈಲ್ ಫುಲ್​ ಸ್ಕ್ರೀನ್​ಗಾಗಿ ಹೊಸ ಆವೃತ್ತಿ ಹೊರತಂದ ಯೂಟ್ಯೂಬ್

Thu Feb 3 , 2022
ಯೂಟ್ಯೂಬ್ ತನ್ನ ಮೊಬೈಲ್ ಅಪ್ಲಿಕೇಶನ್‌ನ ಫುಲ್​ ಸ್ಕ್ರೀನ್ ಪ್ಲೇಯರ್‌ಗಾಗಿ ಹೊಸ ಆವೃತ್ತಿಯನ್ನು ಹೊರತಂದಿದ್ದು, ಏನೆಲ್ಲಾ ಬದಲಾವಣೆ ಕಾಣಬಹುದು ಎಂದು ಇಲ್ಲಿದೆ ನೋಡಿ ಮಾಹಿತಿ. ಸ್ಯಾನ್ ಫ್ರಾನ್ಸಿಸ್ಕೋ: ಗೂಗಲ್ ಮಾಲೀಕತ್ವದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಯೂಟ್ಯೂಬ್ ತನ್ನ ಮೊಬೈಲ್ ಅಪ್ಲಿಕೇಶನ್‌ನ ಪೂರ್ಣ ಸ್ಕ್ರೀನ್ ಪ್ಲೇಯರ್‌ಗಾಗಿ ಹೊಸ ಇಂಟರ್ಫೇಸ್ ಅನ್ನು ಹೊರತಂದಿದೆ.ದಿ ವರ್ಜ್ ವರದಿ ಪ್ರಕಾರ, ಹೊಸ ಇಂಟರ್ಫೇಸ್ ಕೆಲವು ತಾಜಾ ವೈಶಿಷ್ಟ್ಯಗಳನ್ನು ಪರಿಚಯಿಸುತ್ತದೆ. ಈ ಆವೃತ್ತಿ ವಿಡಿಯೋವನ್ನು ಲೈಕ್ಸ್ ಮತ್ತು ಡಿಸ್​ […]

Advertisement

Wordpress Social Share Plugin powered by Ultimatelysocial