ನವದೆಹಲಿ : ಉತ್ತರಪ್ರದೇಶ ಉದ್ಯಮಿ ಪಿಯೂಷ್ ಜೈನ್ ಅವರ ಮನೆ, ಕಾರ್ಖಾನೆ ಮತ್ತು ಇತರ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ನಗದು, ಚಿನ್ನಾಭರಣಗಳನ್ನು ಈಗಾಗಲೇ ಜಪ್ತಿ ಮಾಡಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದಾರೆ.
ದೆಹಲಿಯಲ್ಲಿ ನಡೆದ ಜಿಎಸ್ಟಿ ಕೌನ್ಸಿಲ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಕನೌಜ್ನಲ್ಲಿ ಸುಗಂಧ ದ್ರವ್ಯ ವ್ಯಾಪಾರಿ ಮೇಲೆ ದಾಳಿ ನಡೆಸಿ 200 ಕೋಟಿ ರೂ. ವಶಕ್ಕೆ ಪಡಿಸಿಕೊಳ್ಳಲಾಗಿದೆ. ಇದು ಬಿಜೆಪಿ ಹಣವಲ್ಲ ಎಂದು ತಿಳಿಸಿದ್ದಾರೆ.ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಹಣ ಬಿಜೆಪಿ ಪಕ್ಷಕ್ಕೆ ಸೇರಿದ್ದು ಎಂದು ಪ್ರತಿಪಕ್ಷಗಳು ಮಾತನಾಡಿಕೊಳ್ಳುತ್ತಿವೆ.
ಐಟಿ ಅಧಿಕಾರಿಗಳು ತಪ್ಪಾಗಿ ಪಿಯೂಷ್ ಜೈನ್ ನಿವಾಸದ ಮೇಲೆ ದಾಳಿ ನಡೆಸಿವೆ ಎಂಬ ಮಾತು ಕೇಳಿ ಬರಲು ಶುರುವಾಗಿದೆ ಎಂದು ಪ್ರಶ್ನೆ ಮಾಡಿದವು. ಈ ವೇಳೆ ಉತ್ತರ ನೀಡಿದ ನಿರ್ಮಲಾ ಸೀತಾರಾಮನ್, ಇದು ಬಿಜೆಪಿ ಹಣವಲ್ಲ. ಯಾವುದೇ ಸಾಮಾನ್ಯ ವ್ಯಕ್ತಿಯ ಮನೆಯಲ್ಲಿ 24 ಕೆಜಿ ಚಿನ್ನ ಇರಲು ಸಾಧ್ಯವಿಲ್ಲ. ಮನೆಯ ಗೋಡೆ ಎಷ್ಟು ಎತ್ತರವೂ, ನಗದು ಕೂಡ ಅಷ್ಟೇ ಎತ್ತರವಾಗಿದೆ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada