ರಾಜಾವರ್ (ಬಿಹಾರ): ಏಕಾಏಕಿಯಾಗಿ ಮನೆಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಒಂದೇ ಕುಟುಂಬ ಐದು ಮಂದಿ ಮೃತಪಟ್ಟಿರುವ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ್ ಗ್ರಾಮದಲ್ಲಿ ನಡೆದಿದೆ.
ಅಡುಗೆ ಸಿಲಿಂಡರ್ ಸ್ಫೋಟದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದರೂ ಇದಕ್ಕೆ ನಿಖರ ಕಾರಣ ತಿಳಿದುಬಂದಿದೆ.
ಸ್ಥಳದಲ್ಲಿ ಸಿಲಿಂಡರ್ ಸುಟ್ಟುಕರಕಲಾಗಿರುವುದು ಕಂಡುಬಂದಿದೆ. ಆದರೆ ಅದರ ಸ್ಫೋಟದಿಂದಲೇ ಈ ಘಟನೆ ಸಂಭವಿಸಿರುವುದು ಇನ್ನೂ ದೃಢಪಟ್ಟಿಲ್ಲ.
ಘಟನೆಯಲ್ಲಿ ಮೃತಪಟ್ಟವರನ್ನು ಅಂಕುಶ್ ಕುಮಾರ್ (10), ಶಿವಾನಿ ಕುಮಾರಿ (9), ಸೋನಿ ಕುಮಾರಿ (8), ಸೀಮಾ ಕುಮಾರಿ (5) ಮತ್ತು ಅಂಶುಕುಮಾರಿ (10) ಎಂದು ಗುರುತಿಸಲಾಗಿದೆ. ಇವರಲ್ಲಿ ಅಂಕುಶ್, ಶಿವಾನಿ, ಸೋನಿ, ಸೀಮಾ ಒಡಹುಟ್ಟಿದವರು. ಅಂಶುಕುಮಾರಿ ಈ ಮಕ್ಕಳ ಸಂಬಂಧಿಯಾಗಿದ್ದಾರೆ. ಮನೆಗೆ ಬೆಂಕಿ ಬಿದ್ದಾಗ ತಮ್ಮ ಮಕ್ಕಳನ್ನು ರಕ್ಷಿಸಲು ಅಶೋಕ್ ಪಸ್ವಾನ್ ಯತ್ನಿಸಿದ್ದು, ಇವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಅಗ್ನಿ ಅನಾಹುತಕ್ಕೆ ನಿಜವಾದ ಕಾರಣವೇನು ಎಂದು ತಿಳಿದುಬಂದಿಲ್ಲ. ಈ ಸ್ಥಳದಲ್ಲಿ ಒಂದು ಸುಟ್ಟು ಕರಕಲಾಗಿರುವ ಸಿಲಿಂಡರ್ ಗ್ಯಾಸ್ ಮತ್ತು ರೆಗ್ಯುಲೇಟರ್ ಸಿಕ್ಕಿದೆ. ಮನೆಯಲ್ಲಿ ಯಾವುದೇ ವಸ್ತುವೂ ಉಳಿದಿಲ್ಲ. ಎಲ್ಲವೂ ಸುಟ್ಟು ಬೂದಿಯಾಗಿದ್ದು, ಬೆಂಕಿ ಬಿದ್ದಿರುವ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಬಂಕಾ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಕುಮಾರ್ ಗುಪ್ತಾ ತಿಳಿಸಿದ್ದಾರೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: