ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಡುವುನ್ನು ಕಡ್ಡಾಯಗೊಳಿಸಲು ಹೈಕೋರ್ಟ್ ತೀರ್ಮಾನ ಕೈಗೊಂಡಿದೆ.

ಬೆಂಗಳೂರು:ಹೈಕೋರ್ಟ್‌ ಸೇರಿ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಡುವುನ್ನು ಕಡ್ಡಾಯಗೊಳಿಸಲು ಹೈಕೋರ್ಟ್ ತೀರ್ಮಾನ ಕೈಗೊಂಡಿದೆ.ರಾಯಚೂರು ಜಿಲ್ಲಾ ನ್ಯಾಯಾಧೀಶರು ಜನವರಿ 26 ರಂದು ಗಣರಾಜ್ಯೋತ್ಸವ ಸಮಾರಂಭದ ಸ್ಥಳದಿಂದ ಅಂಬೇಡ್ಕರ್ ಅವರ ಫೋಟೋ ತೆಗೆಸಿದ್ದಾರೆ ಎಂದು ಆರೋಪಿಸಿ ರಾಜ್ಯಾದ್ಯಂತ ಪ್ರತಿಭಟನೆ ವ್ಯಕ್ತವಾಗಿತ್ತು.ಅಂಬೇಡ್ಕರ್ ಅವರ ಫೋಟೋ ಕೋರ್ಟ್ ಅಧಿಕೃತ ಸಮಾರಂಭಗಳಲ್ಲಿ ಇಡಲಾಗುತ್ತದೆ. ಜನವರಿ 26 ಗಣರಾಜ್ಯೋತ್ಸವ, ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ, ನವೆಂಬರ್ 26 ಸಂವಿಧಾನ ದಿನದಂದು ಅಂಬೇಡ್ಕರ್ ಅವರ ಫೋಟೋ ಇಡಲಾಗುವುದು.ಜಿಲ್ಲಾ ಮತ್ತು ತಾಲೂಕು ಕೋರ್ಟುಗಳಿಗೆ ಇದರ ಬಗ್ಗೆ ಸೂಚನೆ ನೀಡಲಾಗಿದೆ ಎಂದು ರಿಜಿಸ್ಟ್ರಾರ್ ಜನರಲ್ ಡಿ.ಜಿ. ಶಿವಶಂಕರೇಗೌಡರು ಸೂಚನೆ ನೀಡಿದ್ದಾರೆ.ನ್ಯಾಯಾಧೀಶರು, ತಾವು ಫೋಟೋ ತೆಗೆಸಿರಲಿಲ್ಲ. ತಮ್ಮ ಅರಿವಿಗೆ ಬಾರದೆ ಅಲ್ಲಿ ಫೋಟೋ ಇಟ್ಟು ತೆಗೆಯಲಾಗಿದೆ ಎಂದು ಸ್ಪಷ್ಟನೆ ನೀಡಿದ್ದರು. ಈ ಪ್ರಕರಣ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ವಿವಾದಕ್ಕೆ ಕಾರಣವಾಗಿತ್ತು. ಈಗ ಹೈಕೋರ್ಟ್ ಅಂಬೇಡ್ಕರ್ ಫೋಟೋ ವಿವಾದಕ್ಕೆ ಅಂತ್ಯಹಾಡಿದೆ ಎನ್ನಲಾಗಿದೆ ̤

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿದ್ದಾರೆ.ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲನ್ನು ಧರಿಸಿದರು!

Sat Feb 5 , 2022
    ಶಾಲೆ, ವಿಶ್ವವಿದ್ಯಾಲಯಗಳ ಸಮವಸ್ತ್ರವಿರುವಾಗ ಅದನ್ನು ನಿರಾಕರಿಸಿ ಧಾರ್ಮಿಕ ವೇಶಭೂಷಣವನ್ನು ಧರಿಸಲು ಮತಾಂದರ ಬೇಡಿಕೆ ನಿಯಮಬಾಹಿರವಾಗಿದೆ. ಅದಕ್ಕೆ ಒಂದು ವೇಳೆ ಹಿಂದೂ ವಿದ್ಯಾರ್ಥಿಗಳು ಪ್ರತಿಕ್ರಿಯೆಯ ರೂಪದಲ್ಲಿ ಕೇಸರಿ ಶಾಲನ್ನು ಧರಿಸುತ್ತಿದ್ದರೆ, ಅದರಲ್ಲಿ ತಪ್ಪೇನಿ ಉಡುಪಿ – ಇಲ್ಲಿಯ ಕುಂದಾಪೂರ ಸರಕಾರಿ ವಿಶ್ವವಿದ್ಯಾಲಯದಲ್ಲಿ ಮುಸಲ್ಮಾನ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಹಿಜಾಬ ಧರಿಸಲು ಅನುಮತಿ ನಿರಾಕರಿಸಿದ್ದರಿಂದ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ವಿಶ್ವವಿದ್ಯಾಲಯದ ೧೦೦ ಕ್ಕೂ ಅಧಿಕ […]

Advertisement

Wordpress Social Share Plugin powered by Ultimatelysocial