ಹೈಕಮಾಂಡ್ ಹೇಳಿದರೆ ಸ್ಪರ್ಧೆಗೆ ಸಿದ್ದ : ಸತೀಶ್ ಜಾರಕಿಹೊಳಿ

                ರಾಜ್ಯದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಿಗದಿಯಾಗಿದೆ. ಸುರೇಶ್ ಅಂಗಡಿಯವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಎಪ್ರಿಲ್ 17ರಂದು ಉಪ ಚುನಾವಣೆ ನಡೆಯಲಿದೆ. ಸಂಬಂಧ ರಾಜಕೀಯ ಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಗಳ ಬಗ್ಗೆ ಲೆಕ್ಕಾಚಾರ ಹಾಕುತ್ತಿದೆ.

 

ಬೆಳಗಾವಿ ಉಪಚುನಾವಣೆ ಸ್ಪರ್ಧೆಯ ಬಗ್ಗೆ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಒಂದು ವೇಳೆ ಹೈಕಮಾಂಡ್ ಹೇಳಿದರೆ ಸ್ಪರ್ಧೆಗೆ ಸಿದ್ದ ಎಂದಿದ್ದಾರೆ.ಅಭ್ಯರ್ಥಿ ಸಂಬಂಧ ಈಗಾಗಲೇಮೂರ್ನಾಲ್ಕು ಜನರ ಹೆಸರು ಚಾಲ್ತಿಯಲ್ಲಿದೆಇದರಲ್ಲಿ ನಾನು ಒಬ್ಬನಾಗಿರುವೆ. ಬಗ್ಗೆ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಎರಡು ಮೂರು ದಿನದಲ್ಲಿ ಎಲ್ಲಾ ಗೊತ್ತಾಗುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.ಬೆಳಗಾವಿ ಲೋಕಸಭೆ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಎಪ್ರಿಲ್ 17ರಂದು ಮತದಾನ ನಡೆಯಲಿದೆ. ಮೇ.2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

Please follow and like us:

Leave a Reply

Your email address will not be published. Required fields are marked *

Next Post

ಜಾರಕಿಹೊಳಿ ಸಿಡಿ ಹಿಂದಿನ ಮಾಸ್ಟರ್ ಮೈಂಡ್ ಇವರೇನಾ...?

Thu Mar 18 , 2021
ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಪ್ರಕರಣದಲ್ಲಿ ನನ್ನ ಯಾವುದೇ ಪಾತ್ರವಿಲ್ಲ. ನಾನು ಸಿಡಿ ಪ್ರಕರಣದ ಪಾತ್ರಧಾರನಲ್ಲ. ಕಿಂಗ್ ಪಿನ್-2 ಕೂಡ ಅಲ್ಲ. ದಯವಿಟ್ಟು ನನ್ನ ತೇಜೋವಧೆ ಮಾಡಬೇಡಿ. ಎಸ್ಐಟಿ ಪೊಲೀಸರ ಮುಂದೆ ತನಿಖೆಗೆ ಹಾಜರಾಗಿ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲಿದ್ದೇನೆ. ಮತ್ತೆ ಪೊಲೀಸರು ವಿಚಾರಣೆಗೆ ಕರೆದ್ರೂ ಹಾಜರಾಗುತ್ತೇನೆ ಎಂಬುದಾಗಿ ಸಿಡಿ ಕೇಸ್ ನ ಶಂಕಿತ ಭವಿತ್ ವೀಡಿಯೋ ರಿಲೀಸ್ ನಲ್ಲಿ ತಿಳಿಸಿದ್ದಾರೆ. ಈ ಕುರಿತಂತೆ ಅಜ್ಞಾತ ಸ್ಥಳದಿಂದ ಭವಿತ್ ವೀಡಿಯೋ […]

Advertisement

Wordpress Social Share Plugin powered by Ultimatelysocial