ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕ

ಬೆಂಗಳೂರು: ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ಜುಲೈ 2ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ನೇಮಕ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಆರಾಧೆ ಅವರನ್ನು ನೇಮಿಸಿರುವ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.

ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್ ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ವಿಫಲ: ಪಾಲಿಕೆಗೆ ಕೆಟ್ಟ ಹೆಸರು ಬರುತ್ತಿದೆ ಎಂದ ಹೈಕೋರ್ಟ್

Thu Jun 30 , 2022
  ಬೆಂಗಳೂರು,ಜೂ.28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ನ್ಯಾಯಾಲಯದ ನಿರ್ದೇಶದನಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಚೀಫ್ ಎಂಜಿನಿಯರ್ ಎಂ.ಲೋಕೇಶ್ ಹೈಕೋರ್ಟ್ ಮುಂದೆ ಹಾಜರಾದರು. ಮೊನ್ನೆ ಮಂಗಳವಾರ ಹೈಕೋರ್ಟ್ ಚಾಟಿ ಬೀಸಿದ್ದ ಹಿನ್ನೆಲೆಯಲ್ಲಿ ಹಾಜರಾದ ಹಿರಿಯ ಅಧಿಕಾರಿಗಳು, ಪೈಥಾನ್ ಯಂತ್ರದ ಮೂಲಕ ಗುಂಡಿ ಮುಚ್ಚಲು ಕಾರ್ಯಾದೇಶ ನೀಡಿರುವ ಬಗ್ಗೆ ವಕೀಲರ ಮೂಲಕ ವಿವರ ನೀಡಿ ಛೀಮಾರಿ ಹಾಕಿಸಿಕೊಳ್ಳುವುದರಿಂದ ಪಾರಾದಾರು. ಆದರೆ […]

Advertisement

Wordpress Social Share Plugin powered by Ultimatelysocial