ಬೆಂಗಳೂರು: ಬಿಟ್ ಕಾಯಿನ್ ಕೇಸ್ ನಲ್ಲಿ ಶ್ರೀಕೃಷ್ಣ ಅಲಿಯಾಸ್ ಶ್ರಿಕಿ ಸಹೋದರ ಸುದರ್ಶನ್ ಗೂ ಸಂಕಷ್ಟ ಎದುರಾಗಿದೆ.ನೆದರ್ ಲೆಂಡ್ ನಲ್ಲಿ ಇಂಜಿನಿಯರ್ ಆಗಿರುವ ಸುದರ್ಶನ್ ತಂದೆಯನ್ನು ನೋಡಲು ಬೆಂಗಳೂರಿಗೆ ಬಂದಿದ್ದಾಗ ಇಡಿ ನೋಟಿಸ್ ಜಾರಿ ಮಾಡಿದೆ.ಮತ್ತೆ ನೆದರ್ ಲೆಂಡ್ ಗೆ ತೆರಳದಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿ ಅಡ್ಡಿಪಡಿಸಿದ್ದಾರೆ.ನೋಟಿಸ್ ನೀಡಿರುವ ಇಡಿ ಕ್ರಮ ಪ್ರಶ್ನಿಸಿ ಹೈಕೋರ್ಟ್ ಶ್ರೀಕಿ ಸಹೋದರ ಸುದರ್ಶನ್ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಏರ್ಪೋರ್ಟ್ ಗೆ ತೆರಳಿದಾಗ ಪ್ರಯಾಣಕ್ಕೆ ನಿರ್ಬಂಧ ವಿಧಿಸಿರುವುದು ತಿಳಿಯಿತು. ಇಡಿ ನಿರ್ಬಂಧದಿಂದ ಉದ್ಯೋಗದ ಹಕ್ಕಿಗೆ ಧಕ್ಕೆಯಾಗಿದೆ. ಪ್ರಯಾಣಿಸುವ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಅವರು ದೂರಿದ್ದಾರೆ.ಇಡಿ ನಿರ್ದೇಶನಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರ ಪ್ರಶ್ನೆಗಳಿಗೆ ಉತ್ತರಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ ಎನ್ನಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada