ಶಾಲೆಗಳಲ್ಲಿ ಬಿಸಿಯೂಟ ವಿತರಣೆಗೆ ಸಮಯ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ!

ಬೆಂಗಳೂರು : ಶಿಕ್ಷಣ ಇಲಾಖೆಯು ರಾಜ್ಯದ ಶಾಲಾ ಮಕ್ಕಳ ಬಿಸಿಯೂಟ ಸಮಯದ ಬದಲಾವಣೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದು, 1-5 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ 1 ಗಂಟೆಯಿಂದ 1.45 ರವರೆಗೆ ಬಿಸಿಯೂಟ ವಿತರಿಸಲು ಸೂಚನೆ ನೀಡಿದೆ.ಶಾಲೆಗಳಲ್ಲಿ ಎಲ್ಲಾ ಮಕ್ಕಳನ್ನು ಒಟ್ಟಿಗೆ ಸಾಲಾಗಿ ನಿಲ್ಲಿಸಿ ಆಹಾರ ವಿತರಿಸುವುದು ಹಾಗೂ ಕಡಿಮೆ ಸಮಯದಲ್ಲಿ ಊಟ ಸ್ವೀಕರಿಸುವುದು, ತಟ್ಟೆ-ಲೋಟ ತೊಳೆಯುವಾಗ ನೂಕನುಗ್ಗಲು ತಡೆಗಟ್ಟಬೇಕಾಗಿದೆ. ಈ ಹಿನ್ನೆಲೆಯಲ್ಲಿ 1 ರಿಂದ 5 ನೇ ತರಗತಿ ಮಕ್ಕಳಿಗೆ 1 ಗಂಟೆಯಿಂದ 1.45 ರವರೆಗೆ, 6 ರಿಂದ 10 ನೇ ತರಗತಿ ಮಕ್ಕಳಿಗೆ 2 ರಿಂದ 2.45 ರವರೆಗೆ ಬಿಸಿಯೂಟ ವಿತರಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.ಇನ್ನು ರಾಜ್ಯ ಸರ್ಕಾರದ ಮೌಲ್ಯಮಾಪನ ಪ್ರಾಧಿಕಾರ ಮತ್ತು ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯವು ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮಾಡಿರುವ ವಿವಿಧ 20 ಶಿಫಾರಸುಗಳನ್ನು ಮಾಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ `ಪಬ್ಲಿಕ್ ಪರೀಕ್ಷೆ'!

Tue Dec 13 , 2022
ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗುತ್ತಿತ್ತು. ಹೀಗಾಗಿ ಕಲಿಕೆ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ […]

Advertisement

Wordpress Social Share Plugin powered by Ultimatelysocial