ವಿಜಯಪುರ: ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ( Government College ) ಶುರುವಾದಂತ ಹಿಜಾಬ್ ವಿವಾದ ( Hijab Row ), ಈಗ ರಾಜ್ಯದ ಇತರೆ ಜಿಲ್ಲೆಗಳಿಗೂ ಹರಡುತ್ತಿದೆ. ಇಂದು ವಿಜಯಪುರದ ಕಾಲೇಜೊಂದರ ವಿದ್ಯಾರ್ಥಿಗಳೂ ಹಿಜಾಬ್ ವಿರೋಧಿಸಿ ಕೇಸರಿ ಶಾಲು ( Kesari Shalu ) ಧರಿಸಿ, ಕಾಲೇಜಿಗೆ ಬಂದಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿನ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಶಾಂತೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಇಂದು ಹಿಜಾಬ್ ವಿರೋಧಿಸಿ, ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.
ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳನ್ನು ತರಗತಿಗೆ ಹಾಜರಾಗದಂತೆ ತಡೆದಂತ ಪ್ರಾಂಶುಪಾಲರು, ಉಪನ್ಯಾಸಕರು ಕೇಸರಿ ಶಾಲು ತೆಗೆದು ತರಗತಿಗೆ ಹಾಜರಾಗುವಂತೆ ಮನವೊಲಿಸಿದ್ದಾಗಿ ತಿಳಿದು ಬಂದಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada