ಮಂಗಳೂರು : ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಮಂಗಳೂರಿನ ವಿವಿ ಘಟಕದ ಕಾಲೇಜಿಗೆ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.
ಇಂದು ತರಗತಿಗೆ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸಿದ್ದು, ಕಾಲೇಜಿನ ಪ್ರಾಂಶುಪಾಲರು ತರಗತಿಗೆ ಬಾರದಂತೆ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ್ದಾರೆ.
ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯಕ್ಕೆ ತೆರಳಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯರನ್ನು ತಡೆಯಲಾಗಿದೆ. ಹಿಜಾಬ್ ತೆಗೆದಿಟ್ಟು ಕಾಲೇಜಿಗೆ ಹೋಗುವಂತೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮತ್ತೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಮಂಗಳೂರು ವಿವಿ ಕಾಲೇಜಿನಲ್ಲಿ ಕಾನೂನು ಪಾಲನೆ ಆಗಿದೆ. ಎಲ್ಲರೂ ಕೋರ್ಟ್ ಆದೇಶ ಪಾಲನೆ ಮಾಡಬೇಕು. ವಿದ್ಯಾರ್ಥಿನಿಯರು ವಿದ್ಯಾಭ್ಯಾಸದತ್ತ ಗಮನ ಹರಿಸಬೆಕು ಎಂದು ಹೇಳಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada