ರಾಜ್ಯದಲ್ಲಿ ಮತ್ತೆ ಶುರುವಾಯ್ತು `ಹಿಜಾಬ್ ವಿವಾದ’

ಮಂಗಳೂರು : ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಮಂಗಳೂರಿನ ವಿವಿ ಘಟಕದ ಕಾಲೇಜಿಗೆ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ.

ಇಂದು ತರಗತಿಗೆ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸಿದ್ದು, ಕಾಲೇಜಿನ ಪ್ರಾಂಶುಪಾಲರು ತರಗತಿಗೆ ಬಾರದಂತೆ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ್ದಾರೆ.

ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯಕ್ಕೆ ತೆರಳಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯರನ್ನು ತಡೆಯಲಾಗಿದೆ. ಹಿಜಾಬ್ ತೆಗೆದಿಟ್ಟು ಕಾಲೇಜಿಗೆ ಹೋಗುವಂತೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಮಂಗಳೂರು ವಿವಿ ಕಾಲೇಜಿನಲ್ಲಿ ಕಾನೂನು ಪಾಲನೆ ಆಗಿದೆ. ಎಲ್ಲರೂ ಕೋರ್ಟ್ ಆದೇಶ ಪಾಲನೆ ಮಾಡಬೇಕು. ವಿದ್ಯಾರ್ಥಿನಿಯರು ವಿದ್ಯಾಭ್ಯಾಸದತ್ತ ಗಮನ ಹರಿಸಬೆಕು ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಮ್ಮು ಮತ್ತು ಕಾಶ್ಮೀರದ ತಾವಿ ಸೇತುವೆಯಿಂದ ಉರುಳಿದ ಮಿನಿ ಬಸ್,

Sat May 28 , 2022
  ಜಮ್ಮು: ಶುಕ್ರವಾರ ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ತಾವಿ ಸೇತುವೆಯಿಂದ ಮಿನಿ ಬಸ್​ ಕೆಳಗೆ ಉರುಳಿದ ಹಿನ್ನೆಲೆಯಲ್ಲಿ ಭಾರೀ ಸಂಭವಿಸಿದೆ. ಮಿನಿ ಬಸ್​ ಸೇತುವೆಯಿಂದ ಕೆಳಗೆ ಬಿದ್ದುದರಿಂದ ಆ ವಾಹನದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮೆಟಾಡೋರ್ ಸೇತುವೆಯ ಮೂಲಕ ಹಾದು ಹೋಗುತ್ತಿದ್ದಾಗ ಆಯತಪ್ಪಿ ಬಸ್ ಕೆಳಗೆ ಬಿದ್ದಿದೆ. ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ನಿನ್ನೆಯಷ್ಟೇ ಜಮ್ಮು ಕಾಶ್ಮೀರದ ಲಡಾಖ್​ನಲ್ಲಿ […]

Advertisement

Wordpress Social Share Plugin powered by Ultimatelysocial