ಹಿಜಾಬ್- ಕೇಸರಿ ಶಾಲು ವಿವಾದದ್ದಲ್ಲಿ ಕಲ್ಲುತೂರಾಟ,

ರಬಕವಿ-ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಹಾಕುವ ಕುರಿತು ಎರಡು ಕೋಮಿನ ವಿದ್ಯಾರ್ಥಿಗಳ ನಡುವೆ ವಿವಾದ ಉಂಟಾಗಿದ್ದು, ಕಾಲೇಜು ಎದುರಿಗೆ ಕಲ್ಲು ತೂರಾಟ ನಡೆಸಿ, ಪ್ರತಿಭಟನೆ ನಡೆಸುತ್ತಿದ್ದಾರೆ.ಕಾಲೇಜಿಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಮನೆಗೆ ಕಳಿಸಲು ಪ್ರಾಧ್ಯಾಪಕರು ಹರಸಾಹಸ ಪಡುತ್ತಿದ್ದು, ಶಾಲೆ ಹತ್ತಿರ ಜಮಾವಣೆಗೊಂಡ ಎರಡು ಕೋಮಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಿಗುವಿನ ವಾತಾವರಣ ಉಂಟಾಗಿದೆ.ಹಿಜಾಬ್ ಧರಿಸಿದ ವಿದ್ಯಾಥಿ೯ನಿಯರನ್ನು ಗೇಟ್ ಮುಂದೆ ಪೊಲೀಸರು ತಡೆದಿದ್ದು, ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಜಮಖಂಡಿ ಕುಡಚಿ ರಾಜ್ಯ ಹೆದ್ದಾರಿ ಬಂದ್ ಆಗಿದ್ದು, ಸ್ಥಳಕ್ಕೆ ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೋಳಿ, ಡಿವೈಎಸ್ಪಿ ಎಮ್ ಪಾಂಡುರಂಗಯ್ಯ, ಸಿಪಿಐ ಜೆ. ಕರುಣೇಶಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಜೋಗಿ ಪ್ರೇಮ್ ಸುದ್ದಿಗೋಷ್ಠಿ ನಡೆಸಿದರು.

Tue Feb 8 , 2022
ಬೆಂಗಳೂರಿನಲ್ಲಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಜೋಗಿ ಪ್ರೇಮ್ ಸುದ್ದಿಗೋಷ್ಠಿ ನಡೆಸಿದರು. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಲ್ಟಿಪ್ಲೆಕ್ಸ್ ಗಳಲ್ಲಿಯೂ ಸ್ಯಾಂಡಲ್ವುಡ್ನ ಚಿತ್ರಗಳಿಗೆ ಅನ್ಯಾಯ ಆಗುತ್ತಿದೆ ಎಂದು ನಟ ಹಾಗೂ ನಿರ್ದೇಶಕ ಪ್ರೇಮ್ ತಿಳಿಸಿದರು.ಕನ್ನಡ ಚಿತ್ರಕ್ಕೆ ಮಲ್ಟಿಪ್ಲೆಕ್ಸ್ಗಳಲ್ಲಿ ಹೆಚ್ಚು ಸೌಂಡ್ ಕೊಡುವುದಿಲ್ಲ ಎನ್ನುವ ಆರೋಪ ಇದೆ. ಇದರಿಂದ ಪ್ರೇಕ್ಷಕರಿಗೆ ಸಿನಿಮಾ ಅಷ್ಟು ಪ್ರಭಾವಕಾರಿ ಎನಿಸುವುದಿಲ್ಲ. ಕನ್ನಡ ಚಿತ್ರಗಳಿಗೆ ನಾನಾ ರೀತಿಯಲ್ಲಿ ಅನ್ಯಾಯ ಆಗುತ್ತಿದೆ ಎನ್ನುವ ಆರೋಪ ಮೊದಲಿನಿಂದಲೂ ಇದೆ. ಇದನ್ನು […]

Advertisement

Wordpress Social Share Plugin powered by Ultimatelysocial