ಹಿಮಾಚಲಪ್ರದೇಶದಲ್ಲಿ ಕಾಂಗ್ರೆಸ್ ಗೆಲವು ಹಿನ್ನಲೆಯಲ್ಲಿ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ!

ಹಿಮಾಚಲಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಗೆಲವು ಹಿನ್ನಲೆಯಲ್ಲಿ ಚಿಕ್ಕೋಡಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿಸಿಡಿಸಿ ವಿಜಯೋತ್ಸವನ್ನು ಆಚರಿಸಿದರು..ಚಿಕ್ಕೋಡಿ ಪಟ್ಟಣದ ಬಸವ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ನೇತ್ರತ್ವದಲ್ಲಿ ವಿಜಯೋತ್ಸವ ಜರುಗಿತು.ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ ಎಂದು ಘೋಷಣೆಗಳನ್ನು ಪಟಾಕಿ ಸಿಡಿಸಿ ವಿಜಯೋತ್ಸವನ್ನು ಆಚರಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಮಾತನಾಡಿ ಹಿಮಾಚಲಪ್ರದೇಶಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿದೆ.ಜನ ಬಿಜೆಪಿಗೆ ತಕ್ಕ ಪಾಠವನ್ನು ಕಲಿಸಿದ್ದಾರೆ ಎಂದರು.ನಂತರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ ಮಾತನಾಡಿ ಭಾರತ ಮುಕ್ತ ಕಾಂಗ್ರೆಸ್ ಎನ್ನುತ್ತಿದ್ದ ಬಿಜೆಪಿಗರಿಗೆ ಹಿಮಾಚಲಪ್ರದೇಶದಲ್ಲಿ ಜನತಕ್ಕ ಪಾಠವನ್ನು ‌ಕಲಿಸಿದ್ದಾರೆ ಎಂದರು.ಈ ಸಂಧರ್ಭದಲ್ಲಿ ಪುರಸಭೆ ಸದಸ್ಯರಾದ ರಾಮಾ ಮಾನೆ,
ಸಾಬೀರ ಜಮಾದಾರ,ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರಗೌಡ ಪಾಟೀಲ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

Please follow and like us:

Leave a Reply

Your email address will not be published. Required fields are marked *

Next Post

GPay, PhonePe, Paytm ಬಳಕೆದಾರರಿಗೆ ಮುಖ್ಯ ಮಾಹಿತಿ: ಪ್ರತಿದಿನ ಹಣ ವರ್ಗಾವಣೆಗೆ ಮಿತಿ!

Fri Dec 9 , 2022
Google Pay(GPay), Phone Pay, Amazon Pay ಮತ್ತು Paytm ನಂತಹ ಎಲ್ಲಾ ಕಂಪನಿಗಳು ಪ್ರತಿದಿನ ವಹಿವಾಟು ಮಾಡುವ ಮಿತಿಯನ್ನು ನಿಗದಿಪಡಿಸಿವೆ, ಇದು ದೇಶದ ಕೋಟಿಗಟ್ಟಲೆ UPI ಬಳಕೆದಾರರ ಮೇಲೆ ಪರಿಣಾಮ ಬೀರುತ್ತದೆ. ಎನ್‌ಪಿಸಿಐನಿಂದ ಈ ಕುರಿತು ಅಧಿಸೂಚನೆ ಹೊರಡಿಸಿ ಮಾಹಿತಿ ನೀಡಲಾಗಿದೆ.ಪ್ರತಿದಿನ ಎಷ್ಟು ವಹಿವಾಟು ಮಾಡಬಹುದು.?ಭಾರತೀಯ ರಾಷ್ಟ್ರೀಯ ಪಾವತಿ ನಿಗಮದ ಮಾರ್ಗಸೂಚಿಗಳ ಪ್ರಕಾರ, ಈಗ ನೀವು UPI ಮೂಲಕ ದಿನಕ್ಕೆ 1 ಲಕ್ಷ ರೂ.ವರೆಗೆ ಮಾತ್ರ ವಹಿವಾಟು ಮಾಡಬಹುದು. […]

Advertisement

Wordpress Social Share Plugin powered by Ultimatelysocial