‘ಕಾಂತಾರ’ ಚಿತ್ರದ ಹಾಡನ್ನು ಕನ್ನಡದಲ್ಲೇ ಹಾಡಿದ ಹಿಂದಿ ನಟಿ;

ತೇಜಸ್ವಿ ಪ್ರಕಾಶ್ ಅವರಿಗೆ ಕಿರುತೆರೆ ಲೋಕದಲ್ಲಿ ಅಪಾರ ಅನುಭವ ಇದೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 11 ವರ್ಷ ಕಳೆದಿದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 67 ಲಕ್ಷ ಮಂದಿ ಹಿಂಬಾಲಿಸುತ್ತಿದ್ದಾರೆ.ನಟಿ ತೇಜಸ್ವಿ ಪ್ರಕಾಶ್ಅವರು ‘ಹಿಂದಿ ಬಿಗ್ ಬಾಸ್ ಸೀಸನ್ 15’ರ ವಿನ್ನರ್ ಆದರು.

ಅಚ್ಚರಿ ಎಂದರೆ ಮನೆ ಒಳಗೆ ಇದ್ದಾಗಲೇ ಅವರಿಗೆಧಾರಾವಾಹಿಯ ಆಫರ್ ಸಿಕ್ಕಿತು. ಸದ್ಯ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಸೀರಿಯಲ್ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಇದಲ್ಲದೆ, ಮರಾಠಿ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಇವೆಲ್ಲದರ ಜೊತೆ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರೋಕೆ ಹೆಚ್ಚೆಚ್ಚು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಾರೆ. ಈಗ ಅವರು ಕನ್ನಡಿಗರ ಮನ ಗೆದ್ದಿದ್ದಾರೆ. ‘ಕಾಂತಾರ’ ಚಿತ್ರದ ‘ಕರ್ಮದ ಕಲ್ಲನು..’ ಹಾಡನ್ನು ಕನ್ನಡದಲ್ಲೇ ಹಾಡುವ ಮೂಲಕ ಮೆಚ್ಚುಗೆ ಪಡೆದಿದ್ದಾರೆ.ತೇಜಸ್ವಿ ಪ್ರಕಾಶ್ ಅವರಿಗೆ ಕಿರುತೆರೆ ಲೋಕದಲ್ಲಿ ಅಪಾರ ಅನುಭವ ಇದೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 11 ವರ್ಷ ಕಳೆದಿದೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 67 ಲಕ್ಷ ಮಂದಿ ಹಿಂಬಾಲಿಸುತ್ತಿದ್ದಾರೆ. ಇದು ಅವರ ಜನಪ್ರಿಯತೆಗೆ ಹಿಡಿದ ಕನ್ನಡಿ. ಈಗ ಅವರು ಹಂಚಿಕೊಂಡಿರುವ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ.

‘ಕರ್ಮದ ಕಲ್ಲನು ಎಡವಿದ ಮನುಜನ

ಬೆರಳಿನ ಗಾಯವು ಮಾಯದು

ಹಗೆಯಲಿ ಕೋವಿಗೆ ತಲೆ ಕೊಡೊ ಮರುಳರ

ಗುಡಿಯಲಿ ದೈವವು ಕಾಯದು

ಕತ್ತಲನು ಮಣಿಸೋಕೆ ಹಚ್ಚಿ ಇಟ್ಟ ದೀಪ

ಊರನ್ನೇ ಸುಡುವಂತ ಜ್ವಾಲೆ ಆಯಿತೇನೋ..’ ಎಂಬ ಸಾಲುಗಳನ್ನು ಅವರು ಕನ್ನಡದಲ್ಲೇ ಹಾಡಿದ್ದಾರೆ. ಈ ಹಾಡಿನ ಅರ್ಥವನ್ನು ಇಂಗ್ಲಿಷ್​ನಲ್ಲಿ ಬರೆದುಕೊಂಡಿದ್ದಾರೆ. ಈ ವಿಡಿಯೋ 20 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತುಲಾ ರಾಶಿ ಭವಿಷ್ಯ.

Thu Mar 2 , 2023
ಸ್ನೇಹಿತರು ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರಬಹುದಾದ ಯಾರಾದರೂಬ್ಬರನ್ನು ನಿಮಗೆ ಪರಿಚಯಿಸುತ್ತಾರೆ. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ ಒಳ್ಳೆಯ ದಿನ. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ ಸ್ವಭಾವ ನಿಮ್ಮ ಸುತ್ತಲಿನವರಿಗೆ ಸಂತೋಷ ಮತ್ತು ಖುಷಿಯನ್ನು ತರುತ್ತದೆ. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ಅನುಭವಿಗಳ […]

Advertisement

Wordpress Social Share Plugin powered by Ultimatelysocial