ಅಚ್ಚರಿ ಎಂದರೆ ಮನೆ ಒಳಗೆ ಇದ್ದಾಗಲೇ ಅವರಿಗೆಧಾರಾವಾಹಿಯ ಆಫರ್ ಸಿಕ್ಕಿತು. ಸದ್ಯ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಸೀರಿಯಲ್ ಒಳ್ಳೆಯ ಟಿಆರ್ಪಿ ಪಡೆದುಕೊಳ್ಳುತ್ತಿದೆ. ಇದಲ್ಲದೆ, ಮರಾಠಿ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಇವೆಲ್ಲದರ ಜೊತೆ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರೋಕೆ ಹೆಚ್ಚೆಚ್ಚು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಾರೆ. ಈಗ ಅವರು ಕನ್ನಡಿಗರ ಮನ ಗೆದ್ದಿದ್ದಾರೆ. ‘ಕಾಂತಾರ’ ಚಿತ್ರದ ‘ಕರ್ಮದ ಕಲ್ಲನು..’ ಹಾಡನ್ನು ಕನ್ನಡದಲ್ಲೇ ಹಾಡುವ ಮೂಲಕ ಮೆಚ್ಚುಗೆ ಪಡೆದಿದ್ದಾರೆ.ತೇಜಸ್ವಿ ಪ್ರಕಾಶ್ ಅವರಿಗೆ ಕಿರುತೆರೆ ಲೋಕದಲ್ಲಿ ಅಪಾರ ಅನುಭವ ಇದೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 11 ವರ್ಷ ಕಳೆದಿದೆ. ಅವರನ್ನು ಇನ್ಸ್ಟಾಗ್ರಾಮ್ನಲ್ಲಿ ಬರೋಬ್ಬರಿ 67 ಲಕ್ಷ ಮಂದಿ ಹಿಂಬಾಲಿಸುತ್ತಿದ್ದಾರೆ. ಇದು ಅವರ ಜನಪ್ರಿಯತೆಗೆ ಹಿಡಿದ ಕನ್ನಡಿ. ಈಗ ಅವರು ಹಂಚಿಕೊಂಡಿರುವ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ.
‘ಕರ್ಮದ ಕಲ್ಲನು ಎಡವಿದ ಮನುಜನ
ಬೆರಳಿನ ಗಾಯವು ಮಾಯದು
ಹಗೆಯಲಿ ಕೋವಿಗೆ ತಲೆ ಕೊಡೊ ಮರುಳರ
ಗುಡಿಯಲಿ ದೈವವು ಕಾಯದು
ಕತ್ತಲನು ಮಣಿಸೋಕೆ ಹಚ್ಚಿ ಇಟ್ಟ ದೀಪ
ಊರನ್ನೇ ಸುಡುವಂತ ಜ್ವಾಲೆ ಆಯಿತೇನೋ..’ ಎಂಬ ಸಾಲುಗಳನ್ನು ಅವರು ಕನ್ನಡದಲ್ಲೇ ಹಾಡಿದ್ದಾರೆ. ಈ ಹಾಡಿನ ಅರ್ಥವನ್ನು ಇಂಗ್ಲಿಷ್ನಲ್ಲಿ ಬರೆದುಕೊಂಡಿದ್ದಾರೆ. ಈ ವಿಡಿಯೋ 20 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada