ಭೋಪಾಲ್ ನಲ್ಲಿ ನಿನ್ನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಿಜಾಬ್ ನ್ನು ಎಲ್ಲಿಯೂ ಧರಿಸುವ ಅವಶ್ಯಕತೆಯಿಲ್ಲ, ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತವಾಗಿಲ್ಲದ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸಬೇಕಾಗುತ್ತದೆ.
ಹೊರಗಡೆ ಓಡಾಡುವಾಗ ಹಿಂದೂ ದೇಶದಲ್ಲಿ ಹಿಜಾಬ್ ಧರಿಸುವ ಅವಶ್ಯಕತೆಯೇ ಬರುವುದಿಲ್ಲ. ನಮ್ಮ ದೇಶ ಹೆಣ್ಣುಮಕ್ಕಳಿಗೆ ಸುರಕ್ಷಿತವಾಗಿದೆ ಎಂದರು.
ಇನ್ನು ಶಿಕ್ಷಣ ಸಂಸ್ಥೆಗಳಲ್ಲಂತೂ ಹಿಜಾಬ್ ಧರಿಸುವ ಪ್ರಶ್ನೆಯೇ ಬರುವುದಿಲ್ಲ, ವಿದ್ಯಾ ದೇಗುಲವೆಂದರೆ ಅಲ್ಲಿ ಎಲ್ಲರೂ ಸಮಾನರು, ಎಲ್ಲರೂ ಏಕರೀತಿಯ ಸಮವಸ್ತ್ರ ಧರಿಸುವುದು ಉತ್ತಮವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿದ್ಯಾ ಸಂಸ್ಥೆಗಳಿಗೆ ಧಾರ್ಮಿಕ ಗುರುತು ಹೊಂದಿರುವ ಬಟ್ಟೆಗಳನ್ನು ಧರಿಸಿಕೊಂಡು ಹೋಗಬಾರದು ಎಂದು ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ ಕೂಡ ಹಲವು ಕಡೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ಡೋಂಟ್ ಕೇರ್ ಅನ್ನುತ್ತಿದ್ದಾರೆ. ಹಿಜಾಬ್ ಧರಿಸಿಕೊಂಡೇ ಶಾಲೆ-ಕಾಲೇಜುಗಳಿಗೆ ಹೋಗುತ್ತಿದ್ದು, ತರಗತಿಯೊಳಗೆ ಬಿಡದಿದ್ದರೆ ವಾಗ್ವಾದ ನಡೆಸಿ ಮನೆಗೆ ವಾಪಾಸ್ ಆಗುತ್ತಿದ್ದಾರೆ. ಪಾಠಗಳನ್ನು, ಪರೀಕ್ಷೆಗಳನ್ನು ಬಹಿಷ್ಕಾರ ಹಾಕಿದ ಪ್ರಸಂಗ ಕೂಡ ನಡೆದಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada