ಹಿಂದೂ ಸಮಾಜವಾದ ಭಾರತದಲ್ಲಿ ಹಿಜಾಬ್ ಧರಿಸುವ ಅವಶ್ಯಕತೆಯಿಲ್ಲ ಎಂದು ಬಿಜೆಪಿ ಸಂಸದೆ ಸಾದ್ವಿ ಪ್ರಗ್ಯ ಹೇಳಿದ್ದಾರೆ.

ಭೋಪಾಲ್ ನಲ್ಲಿ ನಿನ್ನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಿಜಾಬ್ ನ್ನು ಎಲ್ಲಿಯೂ ಧರಿಸುವ ಅವಶ್ಯಕತೆಯಿಲ್ಲ, ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತವಾಗಿಲ್ಲದ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸಬೇಕಾಗುತ್ತದೆ.

ಹೊರಗಡೆ ಓಡಾಡುವಾಗ ಹಿಂದೂ ದೇಶದಲ್ಲಿ ಹಿಜಾಬ್ ಧರಿಸುವ ಅವಶ್ಯಕತೆಯೇ ಬರುವುದಿಲ್ಲ. ನಮ್ಮ ದೇಶ ಹೆಣ್ಣುಮಕ್ಕಳಿಗೆ ಸುರಕ್ಷಿತವಾಗಿದೆ ಎಂದರು.
ಇನ್ನು ಶಿಕ್ಷಣ ಸಂಸ್ಥೆಗಳಲ್ಲಂತೂ ಹಿಜಾಬ್ ಧರಿಸುವ ಪ್ರಶ್ನೆಯೇ ಬರುವುದಿಲ್ಲ, ವಿದ್ಯಾ ದೇಗುಲವೆಂದರೆ ಅಲ್ಲಿ ಎಲ್ಲರೂ ಸಮಾನರು, ಎಲ್ಲರೂ ಏಕರೀತಿಯ ಸಮವಸ್ತ್ರ ಧರಿಸುವುದು ಉತ್ತಮವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿದ್ಯಾ ಸಂಸ್ಥೆಗಳಿಗೆ ಧಾರ್ಮಿಕ ಗುರುತು ಹೊಂದಿರುವ ಬಟ್ಟೆಗಳನ್ನು ಧರಿಸಿಕೊಂಡು ಹೋಗಬಾರದು ಎಂದು ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ ಕೂಡ ಹಲವು ಕಡೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ಡೋಂಟ್ ಕೇರ್ ಅನ್ನುತ್ತಿದ್ದಾರೆ. ಹಿಜಾಬ್ ಧರಿಸಿಕೊಂಡೇ ಶಾಲೆ-ಕಾಲೇಜುಗಳಿಗೆ ಹೋಗುತ್ತಿದ್ದು, ತರಗತಿಯೊಳಗೆ ಬಿಡದಿದ್ದರೆ ವಾಗ್ವಾದ ನಡೆಸಿ ಮನೆಗೆ ವಾಪಾಸ್ ಆಗುತ್ತಿದ್ದಾರೆ. ಪಾಠಗಳನ್ನು, ಪರೀಕ್ಷೆಗಳನ್ನು ಬಹಿಷ್ಕಾರ ಹಾಕಿದ ಪ್ರಸಂಗ ಕೂಡ ನಡೆದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ಹಿನ್ನೆಲೆ ಹುಬ್ಬಳ್ಳಿ-ಧಾರವಾಡ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

Thu Feb 17 , 2022
ರಾಜ್ಯದ ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ವಿವಾದ ಹಿನ್ನೆಲೆ ಹುಬ್ಬಳ್ಳಿ-ಧಾರವಾಡ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಹು-ಧಾ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ನೀಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದು ಕೆಲ ದಿನಗಳು ಕಳೆದಿವೆ. ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial