ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಚಿತ್ರಕ್ಕೆ ಧ್ವನಿ ನೀಡಲಿದ್ದಾರೆ ಧ್ರುವ ಸರ್ಜಾ.!


ಚಿರಂಜೀವಿ ಸರ್ಜಾ ನಮ್ಮನೆಲ್ಲಾ ಬಿಟ್ಟು ಹೋಗಿ ಹತ್ತಿರ ಎರಡುವರ್ಷಗಳಾಗುತ್ತಿದೆ.
ಅವರ ಅಭಿನಯದ ಕೊನೆಯ ಚಿತ್ರ “ರಾಜ ಮಾರ್ತಾಂಡ” ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ. ಧ್ರುವ ಸರ್ಜಾ ಧ್ವನಿ ನೀಡಿರುವ ಈ ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಚಿತ್ರ ಬಿಡುಗಡೆ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಉಪಸ್ಥಿತರಿದ್ದರು. ಮೇಘನಾರಾಜ್ ಹಾಗೂ ಸುಂದರರಾಜ್ ಪತ್ರಿಕಾಗೋಷ್ಠಿಗೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಚಿರು ಸರ್ ನಮ್ಮ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿದ್ದರು. ಡಬ್ಬಿಂಗ್ ಮಾಡುವುದು ಮಾತ್ರ ಬಾಕಿಯಿತ್ತು. ಆನಂತರ ನಡೆಯ ಬಾರದ ನಟನೆ ನಡೆದದ್ದು ಎಲ್ಲರಿಗೂ ಗೊತ್ತೇ ಇದೆ. ನಾನು ಚಿರು ಅವರ ಪಾರ್ಥಿವ ಶರೀರ ನೋಡಲು ಹೋದಾಗ, ಧ್ರುವ ಸರ್ಜಾ ಕೇಳಿದ ಮೊದಲ ಮಾತು, ಅಣ್ಣ ಡಬ್ಬಿಂಗ್ ಮುಗಿಸಿದ್ದಾರಾ? ನಾನು ಇಲ್ಲ ಅಂದೆ. ನಾನು ಮಾಡಿಕೊಡುತ್ತೀನಿ ಅಂದರು. ಹಾಗೆ ಟ್ರೇಲರ್ ಗೆ ಧ್ರುವ ಧ್ವನಿ ನೀಡಿದ್ದಾರೆ. ಸದ್ಯದಲ್ಲೇ ಡಬ್ಬಿಂಗ್ ಪೂರ್ಣಗೊಳಿಸಲಿದ್ದಾರೆ. ದರ್ಶನ್ ಸರ್ ಸಹ ವಾಯ್ಸ್ ಓವರ್ ಕೊಡುವುದಾಗಿ ಹೇಳಿದ್ದಾರೆ. ಮೇಘನಾರಾಜ್ ಹಾಗೂ ಸುಂದರರಾಜ್ ಅವರಂತೂ ನಮ್ಮ ಬೆಂಬಲಕ್ಕೆ ಸದಾ ಇದ್ದಾರೆ. ರಾಯನ್ ರಾಜ್ ಸರ್ಜಾ ಸಹ ನಮ್ಮ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರಿಗೂ ಧನ್ಯವಾದ. ಜೂನ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ದಿನಾಂಕ ನಿಗದಿಯಾಗಿದೆ. ಆದರೆ ಕೊರೋನ ನಾಲ್ಕನೇ ಅಲೆಯ ಪರಿಸ್ಥಿತಿ ನೋಡಿಕೊಂಡು ದಿನಾಂಕ ಘೋಷಣೆ ಮಾಡುತ್ತೇವೆ ಎಂದರು ನಿರ್ದೇಶಕ ರಾಮ್ ನಾರಾಯಣ್.

ಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಬೇಕೆಂದು ಕೊಂಡಿದ್ದೇವೆ. ಚಿರು ಅವರ ೧೦೧ ಅಡಿ ಎತ್ತರದ ಕಟೌಟ್ ನಿಲ್ಲಿಸಲಿದ್ದೇವೆ ಹಾಗೂ ರಾಯನ್ ರಾಜ್ ಸರ್ಜಾ ಅವರ ೫೧ ಎತ್ತರದ ಕಟೌಟ್ ಸಹ ನಿಲಿಸಲಿದ್ದೀವಿ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಶಿವಕುಮಾರ್.

ಅದೇನೊ ಗೊತ್ತಿಲ್ಲ. ಅವರು ನಟಿಸುವ ಬೇರೆ ಚಿತ್ರಗಳ ಸಂಭಾಷಣೆನ್ನು ಅಲ್ಲೇ ಹೇಳಿ, ಹತ್ತು ನಿಮಿಷಕ್ಕೆ ಮರೆತು ಹೋಗತ್ತಿದ್ದರು. ಆದರೆ ಈ ಚಿತ್ರದ ಸಂಭಾಷಣೆ ಮಾತ್ರ ಯಾವಾಗಲೂ ಹೇಳುತ್ತಿದ್ದರು. ಕೊನೆಗೆ ಚಿರು ಬಂದರೆ ನಾವೆಲ್ಲಾ ಆ ಡೈಲಾಗ್ ಹೇಳುತ್ತಿದ್ದೆವು. ಅಷ್ಟು ಈ ಚಿತ್ರವನ್ನು ಹಚ್ಚಿಕೊಂಡಿದ್ದರು. ಅವರಿಲ್ಲದ ಈ ಸಮಯದಲ್ಲಿ ಚಿತ್ರತಂಡಕ್ಕೆ ಬೆಂಬಲ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ನಮ್ಮ ಎರಡು ಕುಟುಂಬಗಳ ಸಹಕಾರ ಸದಾ ನಿಮಗೆ ಇರುತ್ತದೆ ಎಂದರು ಮೇಘನಾರಾಜ್.

ನಟ ಸುಂದರರಾಜ್, ನಾಯಕಿ ದೀಪ್ತಿ ಸಾಥಿ, ಮತ್ತೊಬ್ಬ ನಾಯಕಿ ಟಗರು ಖ್ಯಾತಿಯ ಋಶಿಕಾ ರಾಜ್ (ತ್ರಿವೇಣಿ ಈಗ ಋಶಿಕಾ ರಾಜ್ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದಾರೆ‌), ಚಿರು ಮಿತ್ರರಾದ ಮನೀಷ್, ಸಚಿನ್ ಮುಂತಾದವರು “ರಾಜ ಮಾರ್ತಾಂಡ” ಚಿತ್ರದ ಬಗ್ಗೆ ಮಾತನಾಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಂದನವನದ ಸಾಧಕರಿಗೆ ಅದ್ಭುತ ವೇದಿಕೆ ಸೃಷ್ಟಿಸಿದ ಚಿತ್ತಾರ ಸ್ಟಾರ್ ಅವಾರ್ಡ್ 2022...!

Wed May 4 , 2022
ಚಿತ್ತಾರ ಅಂಗಳದಲ್ಲಿ ತಾರೆಗಳ ಕಲರವ ಕರ್ನಾಟಕದ ಜನಪ್ರಿಯ ಮಾಸ ಪತ್ರಿಕೆಯಾದ ಚಿತ್ತಾರವು ಇದೇ ಏಪ್ರಿಲ್ 30ನೇ ದಿನಾಂಕದಂದು, ಅರಮನೆ ಮೈದಾನದಲ್ಲಿ ತನ್ನ 13ನೇ ವಾರ್ಷಿಕೋತ್ಸವವನ್ನು ಹಾಗೂ ವಾರ್ಷಿಕ ಚಲನಚಿತ್ರ ಪ್ರಶಸ್ತಿ ವಿತರಣಾ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಿತ್ತು. ನಮ್ಮ ನೆಚ್ಚಿನ ಪವರ್ ಸ್ಟಾರ್, ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರಿಗೆ ಈ ಕಾರ್ಯಕ್ರಮವನ್ನು ಅರ್ಪಿಸುವ ಮೂಲಕ ಅವರ ನೆನಪಿನಲ್ಲಿ ಆರಂಭಗೊಂಡ ಈ ಕಾರ್ಯಕ್ರಮದ ಯಶಸ್ವಿಗೆ ಸ್ಯಾಂಡಲ್‌ವುಡ್ ಬಹುತೇಕ ತಾರೆಯರು ಹಾಜರಿದ್ದು […]

Advertisement

Wordpress Social Share Plugin powered by Ultimatelysocial