ಬಿಜೆಪಿಯಲ್ಲಿ ಭಿನ್ನಮತ

ಆಂಕರ್: ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇರುವಾಗಲೇ ಕೋಲಾರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಕೋಲಾರ ಸಂಸದ ಮುನಿಸ್ವಾಮಿ ಹಾಗೂ ಉಸ್ತುವಾರಿ ಸಚಿವ ಮುನಿರತ್ನ ವಿರುದ್ಧ ಮಾಲೂರು ಬಿಜೆಪಿ ಮುಖಂಡರು ತಿರುಗಿಬಿದ್ದಿದ್ದಾರೆ. ಸಂಸದ ಮುನಿಸ್ವಾಮಿ ಹಾಗೂ ಸಚಿವ ಮುನಿರತ್ನ ಕಾರ್ಯವೈಕರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸಂಸದರು, ಉಸ್ತುವಾರಿ ಸಚಿವರು ಹಾಗೂ ಬಿಜೆಪಿ ಮುಖಂಡರ ನಡುವೆ ಹೊಂದಾಣಿಕೆ ಇಲ್ಲ ಎಂಬುದು ಸಾಬೀತಾಗಿದೆ. ಮಾಲೂರು ವಿಧಾನಸಭ ಕ್ಷೇತ್ರದ ಬಿಜೆಪಿ ಮುಖಂಡರು ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ, ಸಂಸದ ಮುನಿಸ್ವಾಮಿ ಹಾಗೂ ಸಚಿವ ಮುನಿರತ್ನ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮಾಲೂರಿನ ಮಾಜಿ ಜೆಡಿಎಸ್ ಶಾಸಕ ಮಂಜುನಾಥ್ ಗೌಡ ಬಿಜೆಪಿ ಸೇರ್ಪಡೆಗೆ ಸಹ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ‌. ಇನ್ನೂ ಮೂಲ ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ
ಸಂಸದರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಮುನಿರತ್ನ ಅವರು ಮಾಲೂರಿನ ಮೂಲ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಡೆಗಣಿಸಿದ್ದು ಕಾರ್ಯಕರ್ತರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ಮುಖಂಡ ಪ್ರಭಾಕರ್ ದೂರಿದರು. ಇದರ ಜೊತೆಗೆ ಮುಖಂಡರನ್ನು ಕಡೆಗಣಿಸಿ ಇತ್ತೀಚೆಗೆ ಮಾಲೂರು ತಾಲೂಕಿನ ಟೇಕಲ್ ನಲ್ಲಿ ನಡೆದ ಕಲ್ಲುಕುಟುಕರ ಸಮಸ್ಯೆಗಳ ಸಭೆ ನಡೆಸಿದ್ದು, ಇದು ಸರ್ಕಾರಿ ಕಾರ್ಯಕ್ರಮವಾಗಿದ್ದರೂ ಮಾಜಿ ಶಾಸಕ ಮಂಜುನಾಥ್ ರನ್ನ ವೇದಿಕೆಗೆ ಆಹ್ವಾನಿಸಿ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ. ಈ ಸಂಬಂಧ ಸಂಸದರ ನಡೆ ವಿರುದ್ಧ ಹೈಕಮಾಂಡ್ ಸಮಿತಿಗೆ ಸ್ಥಳೀಯ ಮುಖಂಡರು ದೂರು ನೀಡಿದ್ದೇವೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೋಲ್ಕತ್ತದಲ್ಲಿ ಬಿಜೆಪಿ ಕಾರ್ಯಕರ್ತ ಸಾವು:

Fri May 6 , 2022
ಕೋಲ್ಕತ್ತ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಅರ್ಜುನ್ ಚೌರಾಸಿಯಾ ಅನುಮಾನಾಸ್ಪದ ಸಾವಿನ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗ್ರಹಿಸಿದ್ದಾರೆ. ಉತ್ತರ ಕೋಲ್ಕತ್ತದ ಕಾಶಿಪುರ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಚೌರಾಸಿಯಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೊಂದು ಕೊಲೆ ಪ್ರಕರಣ, ಟಿಎಂಸಿಯೇ ಹತ್ಯೆ ಮಾಡಿದೆ ಎಂದು ಬಿಜೆಪಿ ದೂರಿದೆ. ಆದರೆ ಈ ಆರೋಪವನ್ನು ಟಿಎಂಸಿ ನಿರಾಕರಿಸಿದೆ. ಅಮಿತ್ ಶಾ ಎರಡು ದಿನಗಳ ಪಶ್ಚಿಮ ಬಂಗಾಳ […]

Advertisement

Wordpress Social Share Plugin powered by Ultimatelysocial