ಚಾಮರಾಜನಗರ:ವಾಹನ ದಟ್ಟಣೆ ನಿಯಂತ್ರಿಸಬೇಕಾದ ಪೊಲೀಸರ ವಾಹನವೇ ರಸ್ತೆ ಮಧ್ಯೆ ಕೆಟ್ಟು ನಿಂತು ಅವಾಂತರ ಸೃಷ್ಟಿಸಿರುವ ಘಟನೆ ಹನೂರು ಪಟ್ಟಣದ ಮುಖ್ಯರಸ್ತೆಯಲ್ಲಿ ನಡೆದಿದೆ.
ಬಂದೋಬಸ್ತ್ ಗಾಗಿ ಆಗಮಿಸಿದ್ದ Swaraz Mazda ವ್ಯಾನ್ ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ಸಂಚಾರಕ್ಕೂ ಅಡ್ಡಿ ಉಂಟಾಗಿದೆ. ಇದರಿಂದಾಗಿ, ಇತರೆ ವಾಹನಗಳು ಹಾಗೂ ಸಾರ್ವಜನಿಕರು ಕಿರಿಕಿರಿಯನ್ನೂ ಅನುಭವಿಸಿದ್ದಾರೆ.
ಇನ್ನೂ ಅಲ್ಲೇ ಇದ್ದ ವಿದ್ಯಾರ್ಥಿಗಳು, ಸಾರ್ವಜನಿಕರು ತಳ್ಳು-ಐಸಾ ಎಂದು ವ್ಯಾನನ್ನು ನೂಕಿಕೊಂಡು ರಸ್ತೆಬದಿವರೆಗೆ ತಂದು ನಿಲ್ಲಿಸಿದ್ದಾರೆ, ಬಳಿಕ ತಾಂತ್ರಿಕ ರಿಪೇರಿಯಿಂದ ವಾಹನ ಮತ್ತೇ ಚಾಲುಗೊಂಡಿದೆ ಎಂದು ತಿಳಿದುಬಂದಿದೆ. ಸದ್ಯ, ಈ ಘಟನೆ ಬುಧವಾರ ಸಂಜೆ ನಡೆದಿದ್ದು ಹಲವು ವಾಟ್ಸಾಪ್ ಗ್ರೂಪ್ ಗಳಲ್ಲಿ ವಿಡಿಯೋ ಹರಿದಾಡುತ್ತಿದೆ, ತುರ್ತು ಸಂದರ್ಭದಲ್ಲಿ ಜನರಿಗೆ ಸೇವೆ ಕಲ್ಪಿಸುವ ಪೊಲೀಸರ ವಾಹನವೇ ಹೀಗಾದರೇ ಗತಿ ಏನು ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada