ಕಂಠೀರವ ಸ್ಟುಡಿಯೋದಲ್ಲಿ “ಹೊಯ್ಸಳ” ಚಿತ್ರದ ಮುಹೂರ್ತ.

ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರಕ್ಕೆ ಡಾಲಿ ಧನಂಜಯ ನಾಯಕ.

ವಿಜಯ್ ಕಿರಗಂದೂರ್ ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ, ಡಾಲಿ ಧನಂಜಯ ನಾಯಕರಾಗಿ ನಟಿಸುತ್ತಿರುವ “ಹೊಯ್ಸಳ” ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು.

ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ಶ್ರೀ ಮಂಜುನಾಥ್ “ಕ್ಲಾಪ್” ಮಾಡಿದರು. ನಿರ್ಮಾಪಕ ಕಾರ್ತಿಕ್ ಅವರ ತಾಯಿ ಶ್ರೀಮತಿ ವಿಜಯಲಕ್ಷ್ಮಿ “ಕ್ಯಾಮೆರಾ” ಚಾಲನೆ ಮಾಡಿದರು. ನಿರ್ದೇಶಕರಾದ ಸಂತೋಷ್ ಆನಂದರಾಮ್, ಡಾ||ಸೂರಿ, ಯಶವಂತ್, ಡಾ||ರಮೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ವಿಜಯ್ ಎನ್ ಅವರು ಕಥೆ, ಚಿತ್ರಕಥೆ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಮೈಸೂರು, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ 75 ದಿನಗಳ ಚಿತ್ರೀಕರಣ ನಡೆಯಲಿದೆ.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಕಾರ್ತಿಕ್ ಎಸ್ ಛಾಯಾಗ್ರಹಣವಿದೆ.
ಸಂಕಲನ ದೀಪು ಎಸ್ ಕುಮಾರ್. ಸಂಭಾಷಣೆ ಮಾಸ್ತಿ ಅವರದು. ಚಂಪಕಧಾಮ ಬಾಬು ಹಾಗೂ ಕುಮಾರ್ ನಿರ್ಮಾಣ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

“ಬಡವ ರಾಸ್ಕಲ್” ನಂತರ ಧನಂಜಯ ಹಾಗೂ ಅಮೃತ ಅಯ್ಯಂಗಾರ್ ಜೋಡಿಯಲ್ಲಿ ಈ ಚಿತ್ರ ಮೂಡಿಬರಲಿದೆ. ಅಚ್ಯುತಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ ಹಾಗೂ ನಾಗಭೂಷಣ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈಗೆ ಪಂದ್ಯ ಗೆಲ್ಲಿಸಿಕೊಟ್ಟ ಧೋನಿ!

Fri Apr 22 , 2022
  ಮುಂಬೈ: ಪಂದ್ಯಗಳನ್ನು ಫಿನಿಶಿಂಗ್ ಮಾಡುವ ವಿಚಾರಕ್ಕೆ ಬಂದಾಗ ತಾನು ಈಗಲೂ ಅತ್ಯುತ್ತಮವಾಗಿದ್ದೇನೆ ಎಂದು ವಿಶ್ವ ಕ್ರಿಕೆಟ್‌ಗೆ ಮಹೇಂದ್ರ ಸಿಂಗ್ ಧೋನಿ ಮತ್ತೊಮ್ಮೆ ನೆನಪಿಸಿದ್ದಾರೆ. 40ರ ವಯಸ್ಸಿನ ಧೋನಿ ಚೆನ್ನೈ ಸೂಪರ್ ಕಿಂಗ್ಸ್‌ನ ನಾಯಕತ್ವವನ್ನು ತ್ಯಜಿಸಿದ ನಂತರ ಐಪಿಎಲ್ ನಲ್ಲಿ ಇದು ಅವರ ಕೊನೆಯ ಸೀಸನ್ ಆಗಬಹುದು ಎಂದು ಹಲವರು ಅಭಿಪ್ರಾಯಪಟ್ಟಿದ್ದರು. ಆದರೆ ಮಾಜಿ ಭಾರತ ನಾಯಕ ಧೋನಿ ತನ್ನಲ್ಲಿ ಇನ್ನೂ ಸಾಕಷ್ಟು ಕ್ರಿಕೆಟ್ ಉಳಿದಿದೆ ಎಂದು ತೋರಿಸಿಕೊಟ್ಟಿದ್ದಾರೆ. ಮುಂಬೈ […]

Advertisement

Wordpress Social Share Plugin powered by Ultimatelysocial