ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ.

ಹನೂರು: ತಾಲೂಕಿನ ಮಂಗಲ ಗ್ರಾಮದ ಬಳಿ ಮಲೆಮಹದೇಶ್ವರ ಬೆಟ್ಟದಿಂದ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಕಾರು ಪಲ್ಟಿ ಹೊಡೆದು ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ.ಮೈಸೂರು ತಾಲೂಕು ಮಾರ್ಬಳ್ಳಿ ಗ್ರಾಮದ ತನ್ಮಯ್ (3) ಮೃತಪಟ್ಟ ಮಗು. ಮಂಜು, ಸಾಕಮ್ಮ, ಕಿರಣ್, ಚಂದ್ರಮ್ಮ, ಸಂತೇಯಮ್ಮ ಹಾಗೂ ಚಾಲಕ ವೆಂಕಟೇಶ್ ಎಂಬವರೇ ಗಾಯಗೊಂಡವರು.ಮಲೆ ಮಾದೇಶ್ವರ ಬೆಟ್ಟದಲ್ಲಿ ಪೂಜೆ ಮುಗಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಾಲೂಕಿನ ಮಂಗಲ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ ಹೊಡೆದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಹನೂರು ಪೊಲೀಸರು ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಸಮೀಪದ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಶಿವಣ್ಣನ ಕೈಲಿ ಎರಡು ತಮಿಳು ಒಂದು ತೆಲುಗು ಸಿನಿಮಾ, ಎರಡರಲ್ಲಿ ಮೇನ್ ಲೀಡ್.

Thu Dec 22 , 2022
  ಕನ್ನಡದ ಅತ್ಯಂತ ಬ್ಯುಸಿ ಸ್ಟಾರ್ ನಟ ಯಾರಾದರೂ ಇದ್ದರೆ ಅದು ಶಿವರಾಜ್ ಕುಮಾರ್ ಮಾತ್ರ. ಈ ವಯಸ್ಸಿನಲ್ಲೂ ಅವರ ಕೈಲಿ ಒಮ್ಮೆಗೆ ಕನಿಷ್ಟ ಆರೇಳು ಸಿನಿಮಾಗಳಿಗೂ ಹೆಚ್ಚೇ ಇರುತ್ತವೆ.ಶಿವಣ್ಣ ಖಾಲಿ ಕೂತ ಉದಾಹರಣೆಯೇ ಇಲ್ಲವೇನೋ. ಶಿವಣ್ಣನಿಗೆ ವಯಸ್ಸಾದಷ್ಟು ಅವಕಾಶಗಳು ಹೆಚ್ಚಾಗುತ್ತಿವೆ.ಅದರಲ್ಲೂ ನಾಯಕ ನಟನ ಅವಕಾಶಗಳೇ ಶಿವಣ್ಣನನ್ನು ಹುಡುಕಿ-ಹುಡುಕಿ ಬರುತ್ತಿವೆ. ಕನ್ನಡ ಮಾತ್ರವೇ ಅಲ್ಲದೆ ಪರಭಾಷೆಗಳಿಂದಲೂ ಶಿವಣ್ಣನಿಗೆ ಹಲವು ಸಿನಿಮಾ ಆಫರ್‌ಗಳು ಒಂದರ ಮೇಲೊಂದರಂತೆ ಬರುತ್ತಲೇ ಇವೆ.ಶಿವಣ್ಣ ಈಗಾಗಲೇ ತಮಿಳಿನ […]

Advertisement

Wordpress Social Share Plugin powered by Ultimatelysocial