ವಿಜಯನಗರ, ಮಾರ್ಚ್ 16: ವಿಜಯನಗರ ಜಿಲ್ಲೆಯ ಜಿಲ್ಲಾ ಕೇಂದ್ರ ಹೊಸಪೇಟೆಯ ರೈಲು ನಿಲ್ದಾಣ ಜನರ ಗಮನ ಸೆಳೆಯುಹೊಸಪೇಟೆ ಜಂಕ್ಷನ್ನತ್ತಿದೆ. ನಿಲ್ದಾಣದ ದ್ವಾರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.ಹೊಸಪೇಟೆ ಜಂಕ್ಷನ್ ಮುಖ್ಯದ್ವಾರವನ್ನು ಯುನೆಸ್ಕೋ ಪಾರಂಪರಿಕ ಮಾನ್ಯತೆ ಪಡೆದಿರುವ ವಿಶ್ವವಿಖ್ಯಾತ ಹಂಪಿಯ ಕಲ್ಲಿನ ರಥದ ಮಾದರಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಬಣ್ಣ ಬಳಿಯುವ ಕಾರ್ಯ ನಡೆಯುತ್ತಭಾರತೀಯ ರೈಲ್ವೆ ಹೊಸಪೇಟೆ ಜಂಕ್ಷನ್ ಮುಖ್ಯದ್ವಾರದ ಚಿತ್ರಗಳನ್ನು ಟ್ವೀಟ್ ಮಾಡಿದೆ. ನೈಋತ್ಯ ರೈಲ್ವೆ ವ್ಯಾಪ್ತಿಗೆ ಸೇರುವ ಹೊಸಪೇಟೆ ರೈಲು ನಿಲ್ದಾಣದ ಮುಖ್ಯ ದ್ವಾರವನ್ನು ಹಂಪಿ ಕಲ್ಲಿನ ರಥದ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅದರ ಅಂತಿಮ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿದೆ.ಹೊಸಪೇಟೆ ಕರ್ನಾಟಕದ ನೂತನ ಜಿಲ್ಲೆಯಾದ ವಿಜಯನಗರ ಕೇಂದ್ರಸ್ಥಾನವಾಗಿದೆ. ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ 2021 ಫೆಬ್ರವರಿ 8 ರಂದು ಅಸ್ತಿತ್ವಕ್ಕೆ ಬಂದಿತು. ವಿಶ್ವವಿಖ್ಯಾತ ಹಂಪಿ ಈ ಜಿಲ್ಲೆಯ ವ್ಯಾಪ್ತಿಯಲ್ಲಿದೆ. ಆದ್ದರಿಂದ ಹಂಪಿ ಕಲ್ಲಿನ ರಥದ ಮಾದರಿಯಲ್ಲಿಯೇ ರೈಲು ನಿಲ್ದಾಣ ನಿರ್ಮಾಣ ಮಾಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada